ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಕ್ತಾಯವಾಗಿದೆ. ಇದೇ ವೇಳೆ ಮತ್ತೊಂದು ಚುನಾವಣೆಗೆ ರಾಜ್ಯ ಸಜ್ಜಾಗುತ್ತಿದೆ. ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಯೂ ಕೂಡ ಏರಿಕೆಯಾಗುತ್ತಿದೆ. 

ಹುಬ್ಬಳ್ಳಿ : ರಾಜ್ಯದಲ್ಲಿ ಲೋಕಸಭಾ ಚುನಾವಣೆ ಕಾವು ಆರಿದೆ. ಅಭ್ಯರ್ಥಿಗಳು ಫಲಿತಾಂಶಕ್ಕೆ ಕಾತರರಾಗಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ಇದೀಗ ವಿಧಾನ ಸಭಾ ಉಪ ಚುನಾವಣೆ ಮಾಡುತ್ತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಚಿವ ಶಿವಳ್ಳಿ ನಿಧನದಿಂದ ತೆರವಾದ ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯುತ್ತಿದ್ದು, ಈ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. 

ಈಗಾಗಲೇ ಶಿವಳ್ಳಿ ಪತ್ನಿಗೆ ಟಿಕೆಟ್ ನೀಡಲು ಕಾಂಗ್ರೆಸ್ ಮುಖಂಡರಲ್ಲಿ ಒಮ್ಮತವಿದೆ. ಆದರೆ ಇಲ್ಲಿನ ಸ್ಥಳೀಯ ಕಾಂಗ್ರೆಸ್ ಮುಖಂಡ ಕಣಕ್ಕಿಳಿಯಲು ಇಚ್ಚಿಸಿದ್ದು, ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠರ ಬಳಿ ಟಿಕೆಟ್ ನೀಡುವಂತೆ ಮನವಿ ಸಲ್ಲಿಸಿದ್ದಾರೆ. 

ಯಲ್ಲಪ್ಪ ಬಿಸಿರೊಟ್ಟಿ ಕುಂದಗೋಳ ತಾಲೂಕಿನ ಹಿರೇಗುಂಜಳದ ಕಾಂಗ್ರೆಸ್ ಮುಖಂಡರಾಗಿದ್ದು, ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಈ ವಿಚಾರ ತಿಳಿಸಿದ್ದಾರೆ. 

ಒಂದು ವೇಳೆ ಟಿಕೆಟ್ ಸಿಗದಿದ್ದಲ್ಲಿ ಪಕ್ಷ ಸೂಚಿಸಿದ ಅಭ್ಯರ್ಥಿಗೆ ಬೆಂಬಲ ನೀಡಿ, ಸಿದ್ಧಾಂತಗಳಿಗೆ ಬದ್ಧನಾಗಿ ನಡೆದುಕೊಳ್ಳುವುದಾಗಿ ಹೇಳಿದ ಯಲ್ಲಪ್ಪ ಬಿಸಿರೊಟ್ಟಿ ಹೇಳಿದ್ದಾರೆ.