ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲು ಮುಂದಾಗಿರುವ ಸುರೇಶಗೌಡ ಮತ್ತು ಶಿವರಾಮೇಗೌಡ ಅವರಿಬ್ಬರೂ  ಸ್ಪರ್ಧಿಸುವ ಬಯಕೆ ಹೊಂದಿದ್ದಾರೆ.

ಮಂಡ್ಯ(ಏ.09): ಮುಂದಿನ ಚುನಾವಣೆಯಲ್ಲಿ ನಾಗಮಂಗಲ ಕ್ಷೇತ್ರದ ಜೆಡಿಎಸ್ ಟಿಕೆಟ್ ಯಾರಿಗೆ ಎಂಬುದು ಇನ್ನೂ ಅಸ್ಪಷ್ಟವಾಗಿಯೇ ಇದೆ.

Add Asianetnews Kannada as a Preferred SourcegooglePreferred

ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲು ಮುಂದಾಗಿರುವ ಸುರೇಶಗೌಡ ಮತ್ತು ಶಿವರಾಮೇಗೌಡ ಅವರಿಬ್ಬರೂ ಸ್ಪರ್ಧಿಸುವ ಬಯಕೆ ಹೊಂದಿದ್ದಾರೆ. ಹೀಗಾಗಿ ನೀವಿಬ್ಬರೇ ಮಾತಾಡಿಕೊಂಡು ನಿರ್ಧರಿಸಿ ಎಂಬ ಸಲಹೆಯನ್ನು ಜೆಡಿಎಸ್ ನಾಯಕರು ನೀಡಿದ್ದಾರೆ. ಪಕ್ಷದ ವಿರುದ್ಧ ಬಂಡಾಯ ಸಾರಿದ ಚಲುವರಾಯಸ್ವಾಮಿ ಅವರನ್ನು ಎದುರಿಸುವ ಸಾಮರ್ಥ್ಯ ಯಾರಿಗಿದೆ ಎಂಬುದನ್ನು ಪರಿಶೀಲಿಸಿ ಟಿಕೆಟ್ ನೀಡಲು ಜೆಡಿಎಸ್ ನಾಯಕರು ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.