ಕೌಟುಂಬಿಕ ವಿಚಾರಕ್ಕೆ ದಂಪತಿ ನಡುವಿನ ಕಲಹವು ವಿಚಿತ್ರ ತಿರುವು ಪಡೆದುಕೊಂಡಿದ್ದು, ‘ಪತಿ ನನ್ನೊಂದಿಗೆ ಬಲವಂತದ ಲೈಂಗಿಕ ಕ್ರಿಯೆ' ನಡೆಸಿದ್ದಾರೆ ಎಂದು ಆರೋಪಿಸಿ 35 ವರ್ಷದ ಮಹಿಳೆಯೊಬ್ಬರು ಭಾರತಿ ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ದಂಪತಿ ನಡುವಿನ ಕಲಹವು ವಿಚಿತ್ರ ತಿರುವು ಪಡೆದುಕೊಂಡಿದ್ದು, ‘ಪತಿ ನನ್ನೊಂದಿಗೆ ಬಲವಂತದ ಲೈಂಗಿಕ ಕ್ರಿಯೆ' ನಡೆಸಿದ್ದಾರೆ ಎಂದು ಆರೋಪಿಸಿ 35 ವರ್ಷದ ಮಹಿಳೆಯೊಬ್ಬರು ಭಾರತಿ ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

Add Asianetnews Kannada as a Preferred SourcegooglePreferred

ಇದರೊಂದಿಗೆ ಎರಡು ವರ್ಷದ ಹಿಂದೆ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತು ಜೈಲು ಸೇರಿದ್ದ ಆತ, ಈಗ ಮತ್ತೊಂದು ಸಂಕಷ್ಟಎದುರಾಗಿದೆ. ಮಹಿಳೆ ನೀಡಿದ ದೂರು ಆಧಾರಿಸಿ ಪೊಲೀಸರು ಅತ್ಯಾಚಾರ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದು, ಈ ಸಂಬಂಧ ಮುಂದಿನ ಕ್ರಮಕ್ಕೆ ಕಾನೂನು ತಜ್ಞರ ಅಭಿಪ್ರಾಯ ಕೇಳಿದ್ದಾರೆ.

ನಾಟಕೀಯ ಬೆಳವಣಿಗೆ: ತಾನು ದುಷ್ಕರ್ಮಿ ಗಳಿಂದ ಅತ್ಯಾಚಾರಕ್ಕೊಳಗಾಗಿದ್ದೇನೆ ಎಂದು ದೂರುದಾರ ಮಹಿಳೆಯು ಶುಕ್ರವಾರ ಸಂಜೆ ಬೌರಿಂಗ್‌ ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದ ಕೂಡಲೇ ಭಾರತಿನಗರ ಠಾಣೆ ಪೊಲೀಸರು, ಆಸ್ಪತ್ರೆಗೆ ಧಾವಿಸಿ ಸಂತ್ರಸ್ತೆಯನ್ನು ವಿಚಾರಣೆ ನಡೆಸಿದರು. ಮೊದಲು ಕೆ.ಆರ್‌.ಪುರದಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಯಿತು ಎಂದು ಆಕೆ, ಇದಾದ ಕೆಲ ಹೊತ್ತಿನ ಬಳಿಕ ಹೇಳಿಕೆ ಬದಲಿಸಿ ‘ಅತ್ಯಾಚಾರ ನಡೆದಿದ್ದು ರಾಮಮೂರ್ತಿ ನಗರದಲ್ಲಿ ಎಂದರು. ಈ ವಿಚಾರವು ಕೆ.ಆರ್‌.ಪುರ ಠಾಣೆ ಪೊಲೀಸರು ಆಸ್ಪತ್ರೆ ಆಗಮಿಸಿದ್ದರು. ತದನಂತರ ಜಂಬೂ ಸವಾರಿ ದಿಣ್ಣೆಯಲ್ಲಿ ನಾಲ್ವರು ಅಪರಿಚಿತ ಯುವಕರು ಅಡ್ಡಗಟ್ಟಿಅತ್ಯಾಚಾರ ಎಸಗಿದರು. ಇದಕ್ಕೆ ಪ್ರತಿರೋಧ ತೋರಿದ್ದಕ್ಕೆ ಸಿಗರೇಟಿನಿಂದ ದೇಹದ ವಿವಿಧೆಡೆ ಸುಟ್ಟರು ಎಂದು ಆಕೆ ದೂರಿದ್ದರು.

ಹೀಗೆ ಅವರು ಪದೇ ಪದೇ ಹೇಳಿಕೆ ಬದಲಿ ಸುತ್ತಿದ್ದರಿಂದ ಪೊಲೀಸರು ಗೊಂದಲಕ್ಕೀಡಾ ದರು. ಅಂತಿಮವಾಗಿ ಮಹಿಳಾ ಸಿಬ್ಬಂದಿ ಹೆಚ್ಚಿನ ವಿಚಾರಣೆ ಒಳಪಡಿಸಿದಾಗ ‘ನನ್ನ ಗಂಡ ಬಲವಂತದಿಂದ ಲೈಂಗಿಕ ಕ್ರಿಯೆ ನಡೆಸಿದರು. ಅವರ ವಿರುದ್ಧ ಕ್ರಮ ಜರುಗಿಸಿ' ಎಂದರು. ಹಾಗೆಯೇ ದೂರನ್ನು ಕೊಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಿನವಿಡೀ ಗೊಂದಲಕಾರಿ ಹೇಳಿಕೆಗಳಿಂದ ಕೆ.ಆರ್‌.ಪುರ, ಭಾರತಿನಗರ ಹಾಗೂ ರಾಮಮೂರ್ತಿ ನಗರ ಠಾಣೆ ಪೊಲೀಸರ ತಲೆ ನೋವು ತಂದಿತ್ತು. ಕೊನೆಗೆ ವೈದ್ಯರು, ದೂರುದಾರ ಮಹಿಳೆ ಮೇಲೆ ಅತ್ಯಾಚಾರ ನಡೆದಿರುವುದು ಖಚಿತವಾಗುತ್ತಿಲ್ಲ ಎಂದು ಹೇಳಿದ ಬಳಿಕವಷ್ಟೆಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ ಎನ್ನಲಾಗಿದೆ.