ಒರಾಯನ್​​ ಮಾಲ್​ನಿಂದ ರಾಜಕಾಲುವೆ ಒತ್ತುವರಿ ಪ್ರಕರಣ ಸಂಬಂಧ ಮಲ್ಲೇಶ್ವರಂನ ಬಿಬಿಎಂಪಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಬಿಬಿಎಂಪಿ ಆಯುಕ್ತ ಮಂಜುನಾಥ್​ ಪ್ರಸಾದ್​ ನೇತೃತ್ವದಲ್ಲಿ ಸಮರ್ಪಣಾ ಸಂಸ್ಥೆ ಮುಖ್ಯ ಕಾರ್ಯದರ್ಶಿ ಶಿವಕುಮಾರ್​ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯುತ್ತಿದೆ.

ಬೆಂಗಳೂರು(ಡಿ.22): ಒರಾಯನ್​​ ಮಾಲ್​ನಿಂದ ರಾಜಕಾಲುವೆ ಒತ್ತುವರಿ ಪ್ರಕರಣ ಸಂಬಂಧ ಮಲ್ಲೇಶ್ವರಂನ ಬಿಬಿಎಂಪಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಬಿಬಿಎಂಪಿ ಆಯುಕ್ತ ಮಂಜುನಾಥ್​ ಪ್ರಸಾದ್​ ನೇತೃತ್ವದಲ್ಲಿ ಸಮರ್ಪಣಾ ಸಂಸ್ಥೆ ಮುಖ್ಯ ಕಾರ್ಯದರ್ಶಿ ಶಿವಕುಮಾರ್​ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯುತ್ತಿದೆ.

ಒರಾಯನ್​​ ಮಾಲ್​ನಿಂದ 3.3 ಒತ್ತುವರಿಯಾಗಿದ್ದು, ಕೋರ್ಟ್​ ಆದೇಶ ನೀಡಿದರೂ ವಿಚಾರಣೆ ನಡೆಸದಿದ್ದಕ್ಕೆ ಶಿವಕುಮಾರ್​ ಆಕ್ರೋಶ ವ್ಯಕ್ತಪಡಿಸಿದ್ರು. ಕೋರ್ಟ್​ಗೆ ಬಂದು ಉತ್ತರ ನೀಡಿ ಅಂತ ಹೇಳಿ ವಿಚಾರಣೆಯಿಂದ ಹೊರನಡೆದ ಪ್ರಸಂಗ ನಡೆದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಬಿಎಂಪಿ ಆಯುಕ್ತ ಮಂಜುನಾಥ್​ ಪ್ರಸಾದ್​ , ಒರಾಯನ್​ ಹಾಗೂ ಇಟಿಎ ಮಾಲ್​'ನಿಂದ ಅಗತ್ಯ ದಾಖಲೆ ಸಲ್ಲಿಕೆಯಾಗಿದೆ. ಹೈಕೋರ್ಟ್​ ಆದೇಶದ ಮೇರೆಗೆ ಸರ್ವೆ ಮಾಡಲಾಗಿದೆ. ಎಲ್ಲರೂ ದಾಖಲೆಗಳನ್ನು ಒದಗಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.