Asianet Suvarna News Asianet Suvarna News

ನ.10ಕ್ಕೆ ಟಿಪ್ಪು ಜಯಂತಿ: ನಿರ್ಧಾರ ಪ್ರಕಟಿಸಿದ ಸರ್ಕಾರ

ಟಿಪ್ಪು ಜಯಂತಿ ಆಚರಣೆ ಕುರಿತ ಸಾಧಕ-ಬಾಧಕಗಳ ಕುರಿತು ಇಂದು [ಶನಿವಾರ] ವಿಧಾನಸೌಧದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಜಯಮಾಲೆ ನೇತೃತ್ವದಲ್ಲಿ ಸಭೆ ಮುಕ್ತಾಗಿದೆ. ಅಂತಿಮವಾಗಿ ಸಭೆಯಲ್ಲಿ ಕೈಗೊಂಡ ನಿರ್ಧಾರವೇನು? ಇಲ್ಲಿದೆ ವಿವರ.

Will Continue to Celebrate Tipu Jayanti on november 10th says minister Jayamala
Author
Bengaluru, First Published Nov 3, 2018, 6:04 PM IST

ಬೆಂಗಳೂರು, [ನ.03]: ಈಗಾಗಲೇ ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ಸಂಬಂಧ ಸಾಕಷ್ಟು ಪರ-ವಿರೋಧಗಳು ವ್ಯಕ್ತವಾಗುತ್ತಿವೆ.

ಕಳೆದ ವರ್ಷ ಟಿಪ್ಪು ಜಯಂತಿ ಆಚರಣೆ ವೇಳೆ ನಡೆದ ಹಿತಕರ ಘಟನೆಗಳಿಂದಾಗಿ ಈ ಬಾರಿ ಟಿಪ್ಪು ಜಯಂತಿ ಆಚರಣೆ ಮಾಡಬೇಕೋ, ಬೇಡವೋ ಎನ್ನುವ ಚರ್ಚೆಗಳು ನಡೆದಿವೆ. 

‘ಟಿಪ್ಪುವನ್ನು ಇತಿಹಾಸದಿಂದಲೇ ತಿರಸ್ಕರಿಸಬೇಕು’

ಈ  ಹಿನ್ನೆಲೆಯಲ್ಲಿ ಟಿಪ್ಪು ಜಯಂತಿ ಆಚರಣೆ ಕುರಿತ ಸಾಧಕ-ಬಾಧಕಗಳ ಕುರಿತು ಇಂದು [ಶನಿವಾರ] ವಿಧಾನಸೌಧದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಜಯಮಾಲೆ ನೇತೃತ್ವದಲ್ಲಿ ಸಭೆ ನಡೆಯಿತು.

ಟಿಪ್ಪು ಜಯಂತಿ ಆಚರಿಸಬೇಕೋ ಬೇಡವೋ? ಇದರಿಂದ ಆಗುವ ಸಾಧಕ-ಬಾಧಕಗಳ ಬಗ್ಗೆ ಚರ್ಚೆಗಳು ನಡೆದವು. ಅಂತಿಮವಾಗಿ ನವೆಂಬರ್ 10ಕ್ಕೆ ಟಿಪ್ಪು ಜಯಂತಿ ಆಚರಣೆಗೆ ನಿರ್ಧಾರಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ಜಯಮಾಲಾ, ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆಗೆ ನಿರ್ಧಾರಿಸಲಾಗಿದ್ದು, ಕಾರ್ಯಕ್ರಮದಲ್ಲಿ ಎಲ್ಲಾ ಸಚಿವರು ಭಾಗಿ ಆಗುತ್ತಾರೆ ಎಂದು ಸ್ಪಷ್ಟಪಡಿಸಿದರು. 

ಈ ಹಿಂದೆ ಯಡಿಯೂರಪ್ಪ ಟಿಪ್ಪು ಟೋಪಿ ಹಾಕಿದ್ರು . ಈಗ ಬಿಜೆಪಿ ವಿರೋಧ ಮಾಡ್ತಿರೋದು ಸರಿಯಲ್ಲ.   ಟಿಪ್ಪು ಜಯಂತಿ ವೇಳೆ ಗಲಾಟೆ ಮಾಡಿದ್ರೆ ಬಿಜೆಪಿಯೇ ಹೊಣೆ.  ಜನರ ರಕ್ಷಣೆ ನಮ್ಮ ಹೊಣೆ ಎಂದು ಸಚಿವೆ ಜಯಮಾಲಾ ಹೇಳಿದರು.

Follow Us:
Download App:
  • android
  • ios