Asianet Suvarna News Asianet Suvarna News

ಸಂಸದ ಪ್ರಜ್ವಲ್ ರೇವಣ್ಣಗೆ ಎದುರಾಯ್ತಾ ಮತ್ತೊಂದು ಸಂಕಷ್ಟ ?

ಹಾಸನ ಸಂಸದ ಪ್ರಜ್ವಲ್  ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಏನದು ..?

Will Go To High Court Against Prajwal Revanna Says A Manju
Author
Bengaluru, First Published Jun 21, 2019, 9:13 AM IST

ಬೆಂಗಳೂರು [ಜೂ.21] : ಲೋಕಸಭಾ ಚುನಾವಣೆ ವೇಳೆ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಿರುವ ಕುರಿತು ಆದಾಯ ತೆರಿಗೆ ಇಲಾಖೆಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದನ್ನು ನೋಡಿದರೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಐಟಿ ಅಧಿಕಾರಿಗಳ ಕೈ-ಕಾಲು ಹಿಡಿದಿರಬಹುದು ಎಂದು ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾಗಿ ಸೋತಿರುವ ಎ.ಮಂಜು ವಾಗ್ದಾಳಿ ಮಾಡಿದ್ದಾರೆ.

ಗುರುವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅಫಿಡವಿಟ್ ನಲ್ಲಿ ಸುಳ್ಳು ದಾಖಲೆ ನೀಡಿರುವ ಬಗ್ಗೆ ಕೋರ್ಟ್ ಮೆಟ್ಟಿಲೇರುತ್ತೇನೆ. ಶುಕ್ರವಾರ ಹೈಕೋರ್ಟ್‌ನಲ್ಲಿ ಈ ಸಂಬಂಧ ರಿಟ್ ಅರ್ಜಿ ಸಲ್ಲಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂಡ ಭೇಟಿಯಾಗಿ ದೂರು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ. 

'ನಿಖಿಲ್-ಪ್ರಜ್ವಲ್ ಸದ್ಯ ತೆರೆ ಮರೆಯಲ್ಲಿ ಇರೋದು ಸೂಕ್ತ'

ಪ್ರಜ್ವಲ್ ರೇವಣ್ಣ ಅವರು ತಮ್ಮ ಆದಾಯ ತೆರಿಗೆ ಬಗ್ಗೆ ಸುಳ್ಳು ಮಾಹಿತಿ ನೀಡಿರುವುದನ್ನು ದಾಖಲೆ ಸಮೇತ ಐಟಿ ಇಲಾಖೆಗೆ ದೂರು ನೀಡಿದ್ದೇವೆ. ಇನ್ನು ಕೂಡ ಯಾವುದೇ ಕ್ರಮ ಕೈಗೊಂಡಿಲ್ಲ. ಇದನ್ನು ನೋಡಿದರೆ ಮಾಜಿ ಪ್ರಧಾನಿಗಳ ಮೊಮ್ಮಗ ಎಂದು ಐಟಿ ಅಧಿಕಾರಿಗಳು ಸುಮ್ಮನಾಗಿದ್ದಾರೆಯೇ ಎಂದು ಖಾರವಾಗಿ ಪ್ರಶ್ನಿಸಿದರು. 

Follow Us:
Download App:
  • android
  • ios