ಪಕ್ಷವನ್ನು ಉಳಿಸಲು ನಿರಂತರ ಹೋರಾಟ ಮಾಡುವುದಾಗಿ ಹೇಳಿದ ಅವರು, ನನ್ನ ಕೊನೆ ಉಸಿರು ಇರುವವರೆಗೂ ಪಕ್ಷಕ್ಕಾಗಿ ದುಡಿಯುವುದಾಗಿ ಪನ್ನೀರ್ ಸೆಲ್ವಂ ಹೇಳಿದ್ದಾರೆ.
ಚೆನ್ನೈ (ಫೆ.16): ಮುಖ್ಯಮಂತ್ರಿಯಾಗಿ ಮುಂದುವರಿಯುವ ಕನಸು ಭಗ್ನವಾಗುತ್ತಿದ್ದಂತೆ ಪನ್ನೀರ್ ಸೆಲ್ವಂ ಶಶಿಕಲಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪನ್ನೀರ್ ಸೆಲ್ವಂ, ಯಾವುದೇ ಕಾರಣಕ್ಕೂ ಪಕ್ಷವನ್ನು ಒಡೆಯಲು ಬಿಡಲ್ಲ, ಪಕ್ಷವನ್ನು ಒಂದು ಕುಟುಂಬದ ತೆಕ್ಕೆಗೆ ಸಿಲುಕಿಸಲು ಬಿಡಲ್ಲ ಎಂದಿದ್ದಾರೆ.
ಪಕ್ಷವನ್ನು ಉಳಿಸಲು ನಿರಂತರ ಹೋರಾಟ ಮಾಡುವುದಾಗಿ ಹೇಳಿದ ಅವರು, ನನ್ನ ಕೊನೆ ಉಸಿರು ಇರುವವರೆಗೂ ಪಕ್ಷಕ್ಕಾಗಿ ದುಡಿಯುವುದಾಗಿ ಹೇಳಿದ್ದಾರೆ.
