ವಿಂಗ್ ಕಮಾಂಡರ್ ಅಭಿನಂದನ್’ಗೆ ವೀರಚಕ್ರ ಪ್ರಶಸ್ತಿ| ನಾಳೆ(ಆ.15)ರಂದು ಅಭಿನಂದನ್’ಗೆ ಪ್ರಶಸ್ತಿ ಪ್ರದಾನ|  ಪಾಕ್ ಎಫ್-16 ಯುದ್ಧ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್| ಮಿಗ್-21 ಪತನವಾಗಿ ಪಾಕ್ ವಶದಲ್ಲಿದ್ದ ಅಭಿನಂದನ್| ಪಾಕ್ ವಶದಿಂದ ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದ ವಿಂಗ್ ಕಮಾಂಡರ್|

ನವದೆಹಲಿ(ಆ.14): ಪಾಕ್ ಯುದ್ಧ ವಿಮಾನ ಹೊಡೆದುರುಳಿಸಿ ಪಾಕ್ ವಶದಿಂದ ಭಾರತಕ್ಕೆ ಸುರಕ್ಷಿತವಾಗಿ ಮರಳಿದ್ದ, ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ವೀರಚಕ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. 

Add Asianetnews Kannada as a Preferred SourcegooglePreferred

ನಾಳೆ(ಆ.15)ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ನಡೆಯುವ ಸಮಾರಂಭಧಲ್ಲಿ ಅಭಿನಂದನ್ ಅವರಿಗೆ ವೀರ ಚಕ್ರ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. 

ಫೆ.27 ರಂದು ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದ ಅಭಿನಂದನ್ ತಮ್ಮ ಮಿಗ್-21 ಅಪಘಾತಕ್ಕೀಡಾದ ಪರೀಣಾಮ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಬಿದ್ದು ಪಾಕ್ ಸೈನಿಕರಿಂದ ಬಂಧನಕ್ಕೊಳಗಾಗಿದ್ದರು.

ಆದರೆ ಸತತ ಪ್ರಯತ್ನಗಳ ನಂತರ ಅಭಿನಂದನ್ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಮರಳಿಸಲು ಪಾಕಿಸ್ತಾನ ಸಮ್ಮತಿ ಸೂಚಿಸಿತ್ತು. ವಾಘಾ ಗಡಿಯ ಮೂಲಕ ಅಭಿನಂದನ್ ಭಾರತಕ್ಕೆ ಸುರಕ್ಷಿತವಾಗಿ ಮರಳಿದ್ದರು.