Asianet Suvarna News Asianet Suvarna News

ಅಭಿನಂದನ್‌ಗೆ ಭಗವಾನ್ ಮಹಾವೀರ್ ಅಹಿಂಸಾ ಪುರಸ್ಕಾರ!

ವಿಂಗ್ ಕಮಾಂಡರ್ ಅಭಿನಂದನ್‌ಗೆ 'ಭಗವಾನ್ ಮಹಾವೀರ್ ಅಹಿಂಸಾ ಪುರಸ್ಕಾರ'| ಅಖಿಲ ಭಾರತೀಯ ದಿಗಂಬರ ಜೈನ ಮಹಾಸಮಿತಿ ನಿರ್ಧಾರ| ಏ.17ರ ಭಗವಾನ್ ಮಹಾವೀರ್  ಜಯಂತಿ ದಿನದಂದು ಅಭಿನಂದನ್ ಅವರಿಗೆ ಸನ್ಮಾನ| ಅಭಿನಂದನ್ ಈ ಪ್ರಶಸ್ತಿ ಸ್ವೀಕರಿಸಲಿರುವ ಮೊದಲ ವ್ಯಕ್ತಿ|

Wing Commander Abhinandan Varthaman To Be Awarded Bhagwan Mahavir Ahimsa Puraskar
Author
Bengaluru, First Published Mar 3, 2019, 7:04 PM IST

ನವದೆಹಲಿ(ಮಾ.03): ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ 'ಭಗವಾನ್ ಮಹಾವೀರ್ ಅಹಿಂಸಾ ಪುರಸ್ಕಾರ' ನೀಡಿ ಗೌರವಿಸಲಾಗುವುದು ಎಂದು ಅಖಿಲ ಭಾರತೀಯ ದಿಗಂಬರ ಜೈನ ಮಹಾಸಮಿತಿ ತಿಳಿಸಿದೆ. 

ಇದೇ ಏ.17ರ ಭಗವಾನ್ ಮಹಾವೀರ್  ಜಯಂತಿ ದಿನದಂದು ಅಭಿನಂದನ್ ಅವರಿಗೆ ಈ ಪುರಸ್ಕಾರ ನೀಡಲಾಗುವುದು ಅಖಿಲ ಭಾರತೀಯ ದಿಗಂಬರ ಜೈನ ಮಹಾಸಮಿತಿ ತಿಳಿಸಿದೆ.

ಈ ಪ್ರಶಸ್ತಿ 2.51 ಲಕ್ಷ ರೂ. ನೆನಪಿನ ಕಾಣಿಕೆ ಮತ್ತು ಪ್ರಮಾಣಪತ್ರ ಒಳಗೊಂಡಿರುತ್ತದೆ ಎಂದು ಭಾರತೀಯ ದಿಗಂಬರ ಜೈನ ಮಹಾಸಮಿತಿ ತಿಳಿಸಿದೆ.

ಅಭಿನಂದನ್ ಈ ಪ್ರಶಸ್ತಿ ಸ್ವೀಕರಿಸಲಿರುವ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. 

ಪಾಕಿಸ್ತಾನದ ಎಫ್-16 ವಿಮಾನವನ್ನು ಬೆನ್ನಟ್ಟಿ ಹೊಡೆದುರುಳಿಸಿದ ಮಿಗ್-21 ವಿಮಾನದ ಪೈಲಟ್ ಅಭಿನಂದನ್ ಅವರಿಗೆ ಈ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಮಹಾಸಮಿತಿಯ ಅಧ್ಯಕ್ಷ ಮುನೀಂದ್ರ ಜೈನ್ ತಿಳಿಸಿದ್ದಾರೆ. 

Follow Us:
Download App:
  • android
  • ios