ವಿಂಗ್ ಕಮಾಂಡರ್ ಅಭಿನಂದನ್ಗೆ 'ಭಗವಾನ್ ಮಹಾವೀರ್ ಅಹಿಂಸಾ ಪುರಸ್ಕಾರ'| ಅಖಿಲ ಭಾರತೀಯ ದಿಗಂಬರ ಜೈನ ಮಹಾಸಮಿತಿ ನಿರ್ಧಾರ| ಏ.17ರ ಭಗವಾನ್ ಮಹಾವೀರ್ ಜಯಂತಿ ದಿನದಂದು ಅಭಿನಂದನ್ ಅವರಿಗೆ ಸನ್ಮಾನ| ಅಭಿನಂದನ್ ಈ ಪ್ರಶಸ್ತಿ ಸ್ವೀಕರಿಸಲಿರುವ ಮೊದಲ ವ್ಯಕ್ತಿ|
ನವದೆಹಲಿ(ಮಾ.03): ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ 'ಭಗವಾನ್ ಮಹಾವೀರ್ ಅಹಿಂಸಾ ಪುರಸ್ಕಾರ' ನೀಡಿ ಗೌರವಿಸಲಾಗುವುದು ಎಂದು ಅಖಿಲ ಭಾರತೀಯ ದಿಗಂಬರ ಜೈನ ಮಹಾಸಮಿತಿ ತಿಳಿಸಿದೆ.
ಇದೇ ಏ.17ರ ಭಗವಾನ್ ಮಹಾವೀರ್ ಜಯಂತಿ ದಿನದಂದು ಅಭಿನಂದನ್ ಅವರಿಗೆ ಈ ಪುರಸ್ಕಾರ ನೀಡಲಾಗುವುದು ಅಖಿಲ ಭಾರತೀಯ ದಿಗಂಬರ ಜೈನ ಮಹಾಸಮಿತಿ ತಿಳಿಸಿದೆ.
ಈ ಪ್ರಶಸ್ತಿ 2.51 ಲಕ್ಷ ರೂ. ನೆನಪಿನ ಕಾಣಿಕೆ ಮತ್ತು ಪ್ರಮಾಣಪತ್ರ ಒಳಗೊಂಡಿರುತ್ತದೆ ಎಂದು ಭಾರತೀಯ ದಿಗಂಬರ ಜೈನ ಮಹಾಸಮಿತಿ ತಿಳಿಸಿದೆ.
ಅಭಿನಂದನ್ ಈ ಪ್ರಶಸ್ತಿ ಸ್ವೀಕರಿಸಲಿರುವ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ಪಾಕಿಸ್ತಾನದ ಎಫ್-16 ವಿಮಾನವನ್ನು ಬೆನ್ನಟ್ಟಿ ಹೊಡೆದುರುಳಿಸಿದ ಮಿಗ್-21 ವಿಮಾನದ ಪೈಲಟ್ ಅಭಿನಂದನ್ ಅವರಿಗೆ ಈ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಮಹಾಸಮಿತಿಯ ಅಧ್ಯಕ್ಷ ಮುನೀಂದ್ರ ಜೈನ್ ತಿಳಿಸಿದ್ದಾರೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Mar 3, 2019, 7:04 PM IST