ತಲೆ ಕತ್ತರಿಸಿ ಹಾಕ್ತೀನಿ: ಬಿಜೆಪಿ ನಾಯಕಗೆ ಹರ್ಯಾಣ ಸಿಎಂ ಖಟ್ಟರ್‌ ಎಚ್ಚರಿಕೆ| ಅಹಂಕಾರ ಆರೋಗ್ಯಕ್ಕೆ ಒಳ್ಳೆದಲ್ಲ ಎಂದ ಕಾಂಗ್ರೆಸ್

ಚಂಡೀಗಢ[ಸೆ.12]: ಹರ್ಯಾಣ ಸಿಎಂ ಮನೋಹರ್‌ಲಾಲ್‌ ಖಟ್ಟರ್‌ ಬಿಜೆಪಿ ನಾಯಕನೊಬ್ಬನಿಗೆ ತಲೆ ಕತ್ತರಿಸಿ ಹಾಕ್ತೀನಿ ಎಂದು ಎಚ್ಚರಿಕೆ ನೀಡಿದ ಘಟನೆ ಬುಧವಾರ ಇಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚುನಾವಣಾ ಪ್ರಚಾರದ ರೋಡ್‌ ಶೋ ಒಂದರಲ್ಲಿ ಖಡ್ಗ ಹಿಡಿದು ಭಾಷಣ ಮಾಡುತ್ತಿದ್ದ ಖಟ್ಟರ್‌ ಈ ಖಡ್ಗದಿಂದ ವಿರೋಧಿಗಳನ್ನು ಹೇಗೆ ನಿರ್ನಾಮ ಮಾಡಬಹುದು ಎಂದು ಹೇಳುತ್ತಿದ್ದರು. ಈ ವೇಳೆ ಪಕ್ಕದಲ್ಲಿದ್ದ ಅವರ ಪಕ್ಷದ ನಾಯಕನೊಬ್ಬ ಖಟ್ಟರ್‌ಗೆ ಕಿರೀಟ ತೊಡಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಸಿಎಂ ಏನು ಮಾಡುತ್ತಿದ್ದೀಯಾ? ನಿನ್ನ ತಲೆ ಕತ್ತರಿಸಿ ಹಾಕುತ್ತೇನೆ ಎಂದು ಅಬ್ಬರಿಸಿದ್ದಾರೆ.

Scroll to load tweet…

ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಟ್ವೀಟ್ ಮಾಡಿರುವ ಕಾಂಗ್ರೆಸ್ 'ಹುಷಾರಾಗಿರಿ, ಅಹಂಕಾರ ಆರೋಗ್ಯಕ್ಕೆ ಮಾರಕ' ಎಂದಿದೆ.