Asianet Suvarna News Asianet Suvarna News

ಪರಿಕ್ಕರ್ ಅನಾರೋಗ್ಯ: ಗೋವಾದಲ್ಲಿ ಕಾಂಗ್ರೆಸ್ ಸರ್ಕಾರ?

ಮನೋಹರ್ ಪರಿಕ್ಕರ್ ಗೆ ಮತ್ತೆ ಅನಾರೋಗ್ಯ! ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾದ ಗೋವಾ ಸಿಎಂ! ಗೋವಾದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಕಾಂಗ್ರೆಸ್! ರಾಜ್ಯಪಾಲೆ ಭೇಟಿ ಮಾಡಿ ಸರ್ಕಾರ ರಚನೆಯ ಪತ್ರ ನೀಡಿದ ಕಾಂಗ್ರೆಸ್

With Manohar Parrikar On Health Leave, Congress Stakes Claim In Goa
Author
Bengaluru, First Published Sep 17, 2018, 5:19 PM IST

ಪಣಜಿ(ಸೆ.17): ಅತ್ತ ಅನಾರೋಗ್ಯದ ನಿಮಿತ್ತ ಗೋವಾ ಸಿಎಂ ಮನೋಹರ್ ಪರಿಕ್ಕರ್ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಇತ್ತ ಪ್ರತಿಪಕ್ಷ ಕಾಂಗ್ರೆಸ್ ರಾಜಭವನಕ್ಕೆ ತೆರಳಿ ನೂತನ ಸರ್ಕಾರ ರಚಿಸುವ ಹಕ್ಕು ಮಂಡಿಸಿದೆ.

ಮನೋಹರ್ ಪರಿಕ್ಕರ್ ಅವರ ಸರ್ಕಾರ ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ ಬಿಜೆಪಿ ನೇತೃತ್ವದ ಸರ್ಕಾರವನ್ನು ವಜಾಗೊಳಿಸಿ, ನೂತನ ಸರ್ಕಾರ ರಚನೆಗೆ ನಮಗೆ ಆಹ್ವಾನ ನೀಡುವಂತೆ ಕಾಂಗ್ರೆಸ್ ರಾಜ್ಯಪಾಲೆ ಮೃದುಲ ಸಿನ್ಹಾ ಅವರಿಗೆ ಸಲ್ಲಿಸಿದ ಪತ್ರದಲ್ಲಿ ಮನವಿ ಮಾಡಿದೆ.

ಕಾಂಗ್ರೆಸ್ ಶಾಸಕಾಂಗ ಸಭೆಯ ನಂತರ ನಾವು ರಾಜಭವನಕ್ಕೆ ತೆರಳಿ ಮನವಿ ಸಲ್ಲಿಸಿದ್ದೇವೆ. ಆದರೆ ರಾಜ್ಯಪಾಲರು ಇರಲಿಲ್ಲ. ಹೀಗಾಗಿ ಮತ್ತೆ ನಾಳೆ ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ. ರಾಜ್ಯಪಾಲರು ಯಾವುದೇ ಕಾರಣಕ್ಕೂ ವಿಧಾನಸಭೆ ವಿಸರ್ಜನೆ ಮಾಡಬಾರದು. ನಮಗೆ ಅವಕಾಶ ನೀಡಲಿ. ಕಾಂಗ್ರೆಸ್ ಸರ್ಕಾರ ರಚಿಸಲಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಚಂದ್ರಕಾಂತ್ ಕವಲೆಕರ್ ಹೇಳಿದ್ದಾರೆ.

ಮನೋಹರ್ ಪರಿಕ್ಕರ್ ಅವರು ಕಳೆದ ಶನಿವಾರ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Follow Us:
Download App:
  • android
  • ios