ಯುವಕನ ಸಾವಿಗೆ ಪ್ರತಿಕಾರವಾಗಿ ಮಹಿಳೆ ಬೆತ್ತಲೆ ಮೆರವಣಿಗೆ
ಯುವಕನೋರ್ವನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಬೆತ್ತಲಾಗಿ ಮೆರವಣಿಗೆ ಮಾಡಿದ ಅಮಾನವೀಯ ಘಟನೆಯೊಂದು ಬಿಹಾರದಲ್ಲಿ ನಡೆದಿದೆ.
ಭೋಜ್ ಪುರ್ : ಯುವಕನೋರ್ವನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೋರ್ವರ ಬೆತ್ತಲೆ ಮೆರವಣಿಗೆ ಮಾಡಿದ ಹೀನಾಯ ಘಟನೆಯೊಂದು ಬೆಳಕಿಗೆ ಬಂದಿದೆ.
ಬಿಹಾರ ಭೋಜ್ಪುರ್ ಜಿಲ್ಲೆಯ ಬಿಹಿಯಾ ಠಾಣಾ ವ್ಯಾಪ್ತಿಯಲ್ಲಿ ಈ ಅಮಾನವೀಯವಾದ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ವಿಮಲೇಶ್ ಶಾ ಎನ್ನುವ ಯುವಕ ಕಳೆದ ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ. ಸೋಮವಾರ ರೈಲ್ವೆ ಹಳಿ ಬಳಿಯಲ್ಲಿ ಆತನ ಮೃತದೇಹ ಪತ್ತೆಯಾಗಿತ್ತು ಎಂದು ಭೋಜ್ ಪುರ್ ಎಸ್ ಪಿ ಅವಕಾಶ್ ಕುಮಾರ್ ಹೇಳಿದ್ದಾರೆ.
ವಿಮಲೇಶ್ ಊರಿನ ಜನರು ವಿಚಾರ ತಿಳಿಯುತ್ತಿದ್ದ ಸ್ಥಳದಲ್ಲೆ ಅತ್ಯಧಿಕ ಸಂಖ್ಯೆಯಲ್ಲಿ ನೆರೆದಿದ್ದು, ಈ ನಿಟ್ಟಿನಲ್ಲಿ ಅನೇಕ ಅಂಗಡಿಗಳಿಗೆ ಬೆಂಕಿ ಹಚ್ಚಿ, ಸಿಕ್ಕ ಸಿಕ್ಕವರನ್ನು ಥಳಿಸಿ, ಮಹಿಳೆಯನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದಾರೆ.
ಸ್ಥಳದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಪೊಲೀಸರು ನೆರೆದು ಪರಿಸ್ಥಿತಿ ಹತೋಟಿಗೆ ತರುವಲ್ಲಿ ಹರಸಾಹಸ ಪಟ್ಟಿದ್ದಾರೆ.