ಒಂದು ಕಡೆ ಸೈನಿಕರು ಹಗಲು ರಾತ್ರಿ ದೇಶದ ಗಡಿಯನ್ನು ಕಾಯುತ್ತಿದ್ದರೆ, ಕೆಲವೊಂದು ರಾಜಕೀಯ ಪಕ್ಷಗಳು ಅವರ ಮೇಲೆ ಹರಿಹಾಯುತ್ತಿದ್ದಾರೆ ಎಂದು ಬಿಜಿಪಿ ನಾಯಕ ಸಮಿತ್ ಪಾತ್ರ ಕಿಡಿಕಾರಿದ್ದಾರೆ.

ಲಖನೌ(ಜೂ.28): ಭಾರತೀಯ ಸೇನೆಯ ಯೋಧರು ಅತ್ಯಾಚಾರಿಗಳು ಎಂಬ ಗಂಭೀರ ಆರೋಪ ಮಾಡುವ ಮೂಲಕ ಸಮಾಜವಾದಿ ಪಕ್ಷದ ಮುಖಂಡ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಮ್ಮ ಸ್ವಕ್ಷೇತ್ರ ರಾಂಪುರದಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿದ ಆಜಂ ಖಾನ್, ‘ಯೋಧರ ತಲೆ, ಕೈ, ಕಾಲು ಕತ್ತರಿಸುವುದು ಸಾಮಾನ್ಯ. ಆದರೆ ಇತ್ತೀಚೆಗೆ ಮಹಿಳೆಯರು ಯೋಧರ ಜನನಾಂಗವನ್ನು ಕತ್ತರಿಸುತ್ತಿದ್ದಾರೆ. ಅವರಿಗೆ ಯಾವುದರಿಂದ ತೊಂದರೆ ಆಗುತ್ತಿದೆಯೋ ಅದನ್ನು ಮಹಿಳೆಯರು ಕತ್ತರಿಸುತ್ತಿದ್ದಾರೆ’ ಎಂದು ಆರೋಪಿಸುವ ಮೂಲಕ ಯೋಧರು ಅತ್ಯಾಚಾರಿಗಳು ಎಂದು ದೂಷಿಸಿದ್ದಾರೆ.

ಅಜಂಖಾನ್ ಹೇಳಿಕೆಗೆ ಬಿಜಿಪಿ ಸೇರಿದಂತೆ ವಿಪಕ್ಷಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿವೆ. ಒಂದು ಕಡೆ ಸೈನಿಕರು ಹಗಲು ರಾತ್ರಿ ದೇಶದ ಗಡಿಯನ್ನು ಕಾಯುತ್ತಿದ್ದರೆ, ಕೆಲವೊಂದು ರಾಜಕೀಯ ಪಕ್ಷಗಳು ಅವರ ಮೇಲೆ ಹರಿಹಾಯುತ್ತಿದ್ದಾರೆ ಎಂದು ಬಿಜಿಪಿ ನಾಯಕ ಸಮಿತ್ ಪಾತ್ರ ಕಿಡಿಕಾರಿದ್ದಾರೆ.

ಬಲಾಢ್ಯವಾದ ಪ್ರಜಾಪ್ರಭುತ್ವದಡಿಯಲ್ಲಿ ಕೆಲಸ ಮಾಡುವ ಭಾರತೀಯ ಸೇನೆಯನ್ನು ವಿಶ್ವದಾದ್ಯಂತ ಗೌರವಿಸಲಾಗುತ್ತದೆ ಎಂದು ಪಾತ್ರ ಹೇಳಿದ್ದಾರೆ.

ಈ ಹಿಂದೆ ಅಜಂಖಾನ್ ಮಹಿಳೆಯರು ಮೊಬೈಲ್ ಫೋನ್ ಬಳಸುವುದರಿಂದಲೇ ಅವರ ಮೇಲೆ ಅತ್ಯಾಚಾರಗಳು ನಡೆಯುತ್ತವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.