ಊರಿನಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆ, ಮದ್ಯ ಮಾರಾಟ, ಅತ್ಯಾಚಾರ ಮುಂತಾದ ಕಾನೂನುಬಾಹಿರ ಕೃತ್ಯಗಳ ಬಗ್ಗೆ ಆಲೂರು ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಳು.

ಹಾಸನ(ನ.24): ಕಾನೂನು ಬಾಹಿರ ಚಟುವಟಿಕೆಗಳನ್ನು ಪೊಲೀಸರಿಗೆ ತಿಳಿಸಿದ ಪೊಲೀಸ್ ಇನ್ಫಾರ್ಮರ್ ಮೇಲೆಯೇ ಅಮಾನುಷವಾಗಿ, ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ಹಾಸನದಲ್ಲಿ ನಡೆದಿದೆ. ವಾರದ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೈರಾಪುರದ ಗಿರಿಜಾ ಪೊಲೀಸ್ ಇನ್ಫಾರ್ಮರ್ ಆಗಿಯೂ ಸಹ ಕಾರ್ಯನಿರ್ವಹಿಸುತ್ತಿದ್ದಳು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಊರಿನಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆ, ಮದ್ಯ ಮಾರಾಟ, ಅತ್ಯಾಚಾರ ಮುಂತಾದ ಕಾನೂನುಬಾಹಿರ ಕೃತ್ಯಗಳ ಬಗ್ಗೆ ಆಲೂರು ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಳು. ಈ ವಿಷಯ ಸೋರಿಕೆಯಾಗಿದ್ದು, ಇದರಿಂದ ಕುಪಿತಗೊಂಡ ಭೈರಾಪುರ ಗ್ರಾಮದ ಶೇಖರ್, ಮನು, ರಾಧಾಮಣಿ ಸೇರಿದಂತೆ ಸುಮಾರು 20 ಮಂದಿ ಆಕೆಯನ್ನು ವಿವಸ್ತ್ರಗೊಳಿಸಿ, ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಆದರೆ ಈ ವೇಳೆ ಊರಿನ ಯಾರೊಬ್ಬರೂ ಆಕೆಯ ಸಹಾಯಕ್ಕೆ ಬಂದಿಲ್ಲ. ಈ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.