ಮೈಸೂರು ಭಾಗದಲ್ಲಿ ಬಿಜೆಪಿ ಪರ ಮತ ಯಾಚಿಸುವಂತೆ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೇಳಲಿದ್ದಾರೆ.  ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪರ ಪ್ರಚಾರ ಮಾಡುವಂತೆ ಮನವಿ ಮಾಡಲಿದ್ದಾರೆ ಎಂಬ ಸುದ್ದಿಗೆ ಯದುವೀರ್ ತೆರೆ ಎಳೆದಿದ್ದಾರೆ. 

ಬೆಂಗಳೂರು (ಮಾ. 29): ಮೈಸೂರು ಭಾಗದಲ್ಲಿ ಬಿಜೆಪಿ ಪರ ಮತ ಯಾಚಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೇಳಲಿದ್ದಾರೆ. ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪರ ಪ್ರಚಾರ ಮಾಡುವಂತೆ ಮನವಿ ಮಾಡಲಿದ್ದಾರೆ ಎಂಬ ಸುದ್ದಿಗೆ ಯದುವೀರ್ ತೆರೆ ಎಳೆದಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಾನು ರಾಜಕೀಯಕ್ಕೆ ಬರುವುದಿಲ್ಲ. ಮಾರ್ಚ್30 ರಂದು ಅಮಿತ್ ಷಾ ಮೈಸೂರು ಅರಮನೆ ಭೇಟಿ ಬಗ್ಗೆ ಮಾಹಿತಿಯಿಲ್ಲ. ನಾನು ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಬರುವುದಿಲ್ಲ. ಸಮಾಜ ಸೇವೆಗಳಲ್ಲೇ ನನ್ನನ್ನು ತೊಡಗಿಸಿಕೊಳ್ಳುತ್ತೇನೆ. ಯಾವುದೇ ಪಕ್ಷದ ಪ್ರಚಾರ ಕಾರ್ಯದಲ್ಲೂ ತೊಡಗಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಮೈಸೂರು ಭಾಗದಲ್ಲಿ ಬಿಜೆಪಿ ಪರ ಮತ ಯಾಚಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೇಳಲಿದ್ದಾರೆ. ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪರ ಪ್ರಚಾರ ಮಾಡುವಂತೆ ಮನವಿ ಮಾಡಲಿದ್ದಾರೆ. ಮಾರ್ಚ್ 30 ರಂದು ಅರಮನೆಗೆ ಭೇಟಿ ನೀಡುವ ವೇಳೆ ಯದುವೀರ್ ಜೊತೆ ಅಮಿತ್ ಶಾ ಮಾತುಕತೆ ನಡೆಸಲಿದ್ದಾರೆ. ಈಗಾಗಲೇ ಯದುವೀರ್’ನನ್ನು ಪಕ್ಷಕ್ಕೆ ಕರೆತರುವ ಪ್ರಯತ್ನಗಳೂ ನಡೆದಿವೆ. ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಮನಸ್ಸು ಮಾಡದ ಹಿನ್ನೆಲೆಯಲ್ಲಿ ಬಿಜೆಪಿ ಹೊಸ ತಂತ್ರ ಹೆಣೆದಿದೆ.