ಟಿಪ್ಪು ಜಯಂತಿ ನಿಷೇಧಿಸಿದ ಬೆನ್ನಲ್ಲೇ ಇದೀಗ ಹಿಂದು ಕಾರ್ಯಕರ್ತರ ಮೇಲೆ ದಾಖಲಿಸಿದ್ದ ಪ್ರಕರಣಗಳನ್ನು ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ವಾಪಸ್ ಪಡೆದುಕೊಂಡಿದೆ.

ಬೆಂಗಳೂರು, [ಆ.01]:  ಹಿಂದಿನ ಮೈತ್ರಿ ಸರ್ಕಾರದಲ್ಲಿ ದಾಖಲಾಗಿದ್ದ ಹಿಂದು ಕಾರ್ಯಕರ್ತರ ಮೇಲಿನ ಮೊಕದ್ದಮೆಗಳನ್ನು ಯಡಿಯೂರಪ್ಪ ಸರ್ಕಾರ ವಾಪಸ್ ಪಡೆದಿದೆ. 

Add Asianetnews Kannada as a Preferred SourcegooglePreferred

ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿದ ಬೆನ್ನಲ್ಲೇ ಮೈತ್ರಿ ಸರ್ಕಾರದ ಅವಧಿಯಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ಒಟ್ಟು 2000 ಕೇಸ್ ಗಳನ್ನು ಹಿಂಪಡೆದು ರಾಜ್ಯ ಸರ್ಕಾರ ಇಂದು [ಗುರುವಾರ] ಆದೇಶ ಹೊರಡಿಸಿದೆ.

ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ರಾಜ್ಯ ಸರಕಾರ ಎಳ್ಳು ನೀರು

ಈ ಬಗ್ಗೆ ಶಾಸಕರಾದ ಕೆ.ಜಿ.ಬೋಪಯ್ಯ ಹಾಗೂ ರೂಪಾಲಿ ನಾಯ್ಕ ಅವರು ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದ್ದರು. ಈ ಮನವಿಯ ಆಧಾರದ ಮೇಲೆ ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.

ಮಂಗಳೂರು, ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಹಿಂದೂ ಯುವಕರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ವಾಪಸ್ ಪಡೆಯಲಾಗಿದೆ.