ಮೊಬೈಲ್ ಬಳಕೆಗೆ ನಿಷೇಧ ಹೇರಿ ಸಿಎಂ ಆದೇಶ ನೀಡಿದ್ದಾರೆ. ಎಲ್ಲಿ ನಿಷೇಧ..?

ಲಖನೌ : ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯ ನಾಥ್ ತಮ್ಮ ಸಂಪುಟ ಸಭೆ ಸೇರಿದಂತೆ ಎಲ್ಲಾ ರೀತಿಯ ಸರ್ಕಾರಿ ಸಭೆಗಳಲ್ಲಿ ಮೊಬೈಲ್ ಬಳಕೆಗೆ ನಿಷೇಧ ಹೇರಿದ್ದಾರೆ. 

Add Asianetnews Kannada as a Preferred SourcegooglePreferred

ಸಚಿವರು ಮತ್ತು ಅಧಿಕಾರಿಗಳು ಮಹತ್ವದ ವಿಚಾರಗಳ ಚರ್ಚೆ ವೇಳೆಯೂ ಮೊಬೈಲ್‌ನಲ್ಲೇ ಕಾಲ ಕಳೆಯುತ್ತಾರೆ. ಚರ್ಚೆಯ ವಿಷಯಕ್ಕೆ ಮೊಬೈಲ್ ಬಳಕೆಯಿಂದಾಗಿ ಆದ್ಯತೆ ಸಿಗುತ್ತಿಲ್ಲ. 

ಈ ಹಿನ್ನೆಲೆಯಲ್ಲಿ ಸಿಎಂ ಯೋಗಿ ಈ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ. ಇದಕ್ಕೂ ಮುನ್ನ ಸಚಿವರಿಗೆ ಸೈಲೆಂಟ್ ಮೋಡ್‌ನಲ್ಲಿ ಇರಿಸಿಕೊಳ್ಳುವಂತೆ ಸೂಚಿಸಲಾಗಿತ್ತು. ಆದರೆ ಯಶಸ್ವಿ ಆಗದ ಹಿನ್ನೆಲೆ ಯಲ್ಲಿ ಮೊಬೈಲ್‌ಗೆ ನಿಷೇಧ ಹೇರಲಾಗಿದೆ.