ಗುಜರಾತ್​ನಲ್ಲಿ ಭಾರತದ ಉಕ್ಕಿನ ಮನುಷ್ಯ ಸರದಾರ್ ವಲ್ಲಭಭಾಯಿ ಪಟೇಲ್  ಪ್ರತಿಮೆಯಂತೆ ಶ್ರೀರಾಮ ಪ್ರತಿಮೆ ನಿರ್ಮಾಣ ಮಾಡುವ ಪ್ಲ್ಯಾನ್ ಮಾಡಲಾಗಿದೆ: ಎಲ್ಲಿ? ಇಲ್ಲಿದೆ ಇದರ ಮಾಹಿತಿ.

ನವದೆಹಲಿ (ನ. 03): ವಿರೋಧ, ಪ್ರತಿರೋಧ, ಟೀಕೆಗಳ ನಡುವೆಯೂ ಕೇಂದ್ರ ಸರಕಾರವು ಗುಜರಾತ್​ನಲ್ಲಿ ಭಾರತದ ಉಕ್ಕಿನ ಮನುಷ್ಯ ಸರದಾರ್ ವಲ್ಲಭಭಾಯಿ ಪಟೇಲ್ ಅವರ ಬೃಹತ್ ಪ್ರತಿಮೆಯನ್ನ ಅನಾವರಣಗೊಳಿಸಿದೆ.

Add Asianetnews Kannada as a Preferred SourcegooglePreferred

ಇದರ ಬೆನ್ನಲ್ಲೇ ಈಗ ಉತ್ತರ ಪ್ರದೇಶದಲ್ಲಿ ಶ್ರೀ ರಾಮನ ಪುತ್ಥಳಿಯನ್ನು ನಿರ್ಮಿಸಲು ಯೋಗಿ ಆದಿತ್ಯನಾಥ್ ಸರಕಾರ ಯೋಜಿಸಿದೆ. 

ಮಾಧ್ಯಮಗಳಿಗೆ ಸಿಕ್ಕಿರುವ ಮಾಹಿತಿಯಂತೆ ಸರಯೂ ನದಿ ದಂಡೆಯಲ್ಲಿ 100 ಮೀಟರ್​ಗೂ ಅಧಿಕ ಎತ್ತರದ ರಾಮನ ಪ್ರತಿಮೆ ನಿರ್ಮಾಣ ಮಾಡವ ಪ್ಲ್ಯಾನ್ ಇದೆ ಎಂದು ಹೇಳಲಾಗುತ್ತಿದೆ. 

ಅದರಲ್ಲೂ ಮುಖ್ಯವಾಗಿ ಶ್ರೀರಾಮನ ಪ್ರತಿಮೆಯನ್ನ ಅಯೊದ್ಯದಲ್ಲಿಯೇ ನಿರ್ಮಿಸಲು ಯೋಗಿ ಸರ್ಕಾರ ಪ್ಲ್ಯಾನ್ ಮಾಡಿದೆ ಎಂದು ಹೇಳಲಾಗುತ್ತಿದೆ.