ದೆಹಲಿಯಲ್ಲಿ ಪ್ರಧಾನಿ, ಅಮಿತ್ ಶಾರನ್ನು ಭೇಟಿಯಾದ ಯೋಗಿ
ಅಮಿತ್ ಶಾ ನಿವಾಸದಲ್ಲಿ ಭೇಟಿಯಾದ ನಾಯಕರು ಅಯೋಧ್ಯೆ ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ವಿವಾದ, ಮುಂದಿನ ರೂಪುರೇಷೆಗಳು, ಹಾಗೂ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ನವದೆಹಲಿ (ಮಾ.21): ಉತ್ತರ ಪ್ರದೇಶ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾರನ್ನು ಭೇಟಿಯಾಗಿ ಪ್ರಮುಖ ವಿಚಾರಗಳನ್ನು ಚರ್ಚಿಸಿದ್ದಾರೆ.
ಅಮಿತ್ ಶಾ ನಿವಾಸದಲ್ಲಿ ಭೇಟಿಯಾದ ನಾಯಕರು ಅಯೋಧ್ಯೆ ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ವಿವಾದ, ಮುಂದಿನ ರೂಪುರೇಷೆಗಳು, ಹಾಗೂ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ದೆಹಲಿಗೆ ಆಗಮಿಸಿರುವ ಯೋಗಿ ಆದಿತ್ಯನಾಥ್, ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದು, ಬಳಿಕ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವನ್ನು ಭೇಟಿ ಮಾಡಿದ್ದಾರೆ.