ವೇಳೆ ಬಾರ್'ನಲ್ಲಿದ್ದ ಮೂವರು ಯಾಕೋ ಗುರಾಯಿಸಿದ ಎಂದು ಗಲಾಟೆ ಶುರು ಮಾಡಿ ಚಾಕುವಿನಿಂದ ಇರಿದಿದ್ದಾರೆ.

ಬೆಂಗಳೂರು(ಫೆ.03): ಗುರಾಯಿಸಿದ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ಮುದ್ದಿನಪಾಳ್ಯದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಲ್ಲತ್ತಹಳ್ಳಿ ನಿವಾಸಿ ಅರುಣ್(22) ಕೊಲೆಯಾದ ದುರ್ದೈವಿ. ಕಳೆದ ರಾತ್ರಿ ಮುದ್ದಿನಪಾಳ್ಯದ ಮಾರುತಿ ಬಾರ್'ಗೆ ಅರುಣ್ ಸ್ನೇಹಿತರ ಜೊತೆ ಮದ್ಯ ಖರೀದಿಸಲು ತೆರಳಿದ್ದ. ಈ ವೇಳೆ ಬಾರ್'ನಲ್ಲಿದ್ದ ಮೂವರು ಯಾಕೋ ಗುರಾಯಿಸಿದ ಎಂದು ಗಲಾಟೆ ಶುರು ಮಾಡಿ ಚಾಕುವಿನಿಂದ ಇರಿದಿದ್ದಾರೆ. ಜೊತೆಯಲ್ಲಿದ್ದ ಕಿಶನ್ ಎಂಬಾತನಿಗೂ ಇರಿದಿದ್ದಾರೆ. ತಕ್ಷಣವೇ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅರುಣ್ ಮೃತಪಟ್ಟಿದ್ದಾನೆ. ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.