ಕಮಲಾನಗರದಲ್ಲಿ ಯುವಕನ ಕಗ್ಗೊಲೆ
ಮದನ್, ನಿನ್ನೆ ಸಂಜೆ ಕೆಲಸ ಮುಗಿಸಿ ಕಮಲಾನಗರದಲ್ಲಿರೋ ತಮ್ಮ ಮನೆಗೆ ಬಂದಿದ್ದಾನೆ. ಈ ವೇಳೆ ಎರಡು ಬೈಕ್'ನಲ್ಲಿ ಬಂದ ಮೂವರು ದುಷ್ಕರ್ಮಿಗಳ ತಂಡ ಮದನ್'ನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು, ಪರಾರಿಯಾಗಿದ್ದಾರೆ.
ಬೆಂಗಳೂರು(ಜುಲೈ 24): ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ಗುಂಪೊಂದು ಯುವಕನೊಬ್ಬನಿಗೆ ಚಾಕು ಇರಿದು ಕೋಲೆಗೈದಿರುವ ಘಟನೆ ಕಮಲಾನಗರ ವ್ಯಾಪ್ತಿಯಲ್ಲಿ ನಡೆದಿದೆ. ಕಮಲಾನಗರ ಮೂಲದ ಮದನ್ ಎಂಬಾತ ಮೃತ ದುರ್ದೈವಿ.
ಬಜಾಜ್ ಅಲೆಯನ್ಸ್'ನಲ್ಲಿ ಕೆಲಸ ಮಾಡುತ್ತಿದ್ದ ಮದನ್, ನಿನ್ನೆ ಸಂಜೆ ಕೆಲಸ ಮುಗಿಸಿ ಕಮಲಾನಗರದಲ್ಲಿರೋ ತಮ್ಮ ಮನೆಗೆ ಬಂದಿದ್ದಾನೆ. ಈ ವೇಳೆ ಎರಡು ಬೈಕ್'ನಲ್ಲಿ ಬಂದ ಮೂವರು ದುಷ್ಕರ್ಮಿಗಳ ತಂಡ ಮದನ್'ನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು, ಪರಾರಿಯಾಗಿದ್ದಾರೆ. ಈ ನಡುವೆ ಅಡ್ಡ ಬಂದ ಮದನ್ ತಾಯಿ ಮೇಲೆ ಕೂಡ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಈ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲಿಸರು ಬಲೆ ಬೀಸಿದ್ದಾರೆ.