ಜಿಲ್ಲಾ ಪಂಚಾಯಿತಿ ಸದಸ್ಯೆಯೊಬ್ಬರು ತಮಗೆ ಸರ್ಕಾರದಿಂದ ಸಿಗುತ್ತಿರುವ ಗೌರವಧನವನ್ನು ರೈತರ ಸಾಲಮನ್ನಾಗೆ ಸಮರ್ಪಿ ಸಲು ಮುಂದಾಗಿದ್ದು, ಇತರ ಜನಪ್ರತಿನಿಧಿಗಳಿಗೂ ಮಾದರಿ ಯಾಗಿದ್ದಾರೆ. 

ಧಾರವಾಡ :  ಜಿಲ್ಲಾ ಪಂಚಾಯಿತಿ ಸದಸ್ಯೆಯೊಬ್ಬರು ತಮಗೆ ಸರ್ಕಾರದಿಂದ ಸಿಗುತ್ತಿರುವ ಗೌರವಧನವನ್ನು ರೈತರ ಸಾಲಮನ್ನಾಗೆ ಸಮರ್ಪಿ ಸಲು ಮುಂದಾಗಿದ್ದು, ಇತರ ಜನಪ್ರತಿನಿಧಿಗಳಿಗೂ ಮಾದರಿ ಯಾಗಿದ್ದಾರೆ. 

Add Asianetnews Kannada as a Preferred SourcegooglePreferred

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಗೇರಿ ಜಿ.ಪಂ. ಸದಸ್ಯೆ ಜ್ಯೋತಿ ಶಿವಾನಂದ ಬೆಂತೂರ ತಮಗೆ ಎರಡು ವರ್ಷಗಳಿಂದ ಗೌರವಧನವಾಗಿ ದೊರೆತಿರುವ 1.2 ಲಕ್ಷಕ್ಕೆ ಇನ್ನು ಮೂರು ವರ್ಷಗಳ ಕಾಲ ದೊರಕಲಿರುವ ಅಂದಾಜು 1.8 ಲಕ್ಷ ಸೇರಿಸಿ ಒಟ್ಟು 3 ಲಕ್ಷವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ನಿರ್ಧರಿಸಲಿದ್ದಾರೆ. 

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಸೋಮ ವಾರದಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ 3 ಲಕ್ಷದ ಚೆಕ್ ಅನ್ನು ಸಲ್ಲಿಸುವುದಾಗಿ ತಿಳಿಸಿದರು. ನಿರಂತರ ಬರದಿಂದ ರೈತರು ಕಂಗಾಲಾಗಿದ್ದಾರೆ. ಜನ ಪ್ರತಿನಿಧಿಗಳು ಗೌರವಧನ ಸಲ್ಲಿಸಿದಲ್ಲಿ ಸರ್ಕಾರದ ಮೇಲಿನ ಅದೆಷ್ಟೋ ಭಾರ ಕಡಿಮೆ ಆಗಲಿದೆ ಎಂಬ ಭಾವನೆಯಿಂದ ತಮ್ಮ ಪ್ರತಿ ತಿಂಗಳ 5 ಸಾವಿರದಂತೆ ಐದು ವರ್ಷಗಳ ಅಂದಾಜು 3 ಲಕ್ಷ ಗೌರವ ಧನವನ್ನು ಒದಗಿಸುತ್ತಿದ್ದೇನೆ ಎಂದು ಜ್ಯೋತಿ ಶಿವಾನಂದ ತಿಳಿಸಿದ್ದಾರೆ.