ಬೆಂಗಳೂರಿನ ಬಿ. ಆರ್ ಸತೀಶ್ಗೆ 'ಆರ್ಯಭಟ ಇಂಟರ್ ನ್ಯಾಷನಲ್ ಅವಾರ್ಡ್'| ತಾಯ್ನಾಡಿನಿಂದ ದೂರವಿದ್ದರೂ ಅನಿವಾಸಿ ಭಾರತೀಯರಿಗಾಗಿ ನಿಸ್ವಾರ್ಥ ಸೇವೆ
ಬೆಂಗಳೂರು[ಜೂ.14]: ಮೂಲತಃ ಬೆಂಗಳೂರಿನವರಾದ ಬಿ. ಆರ್ ಸತೀಶ್, ಕಳೆದ ಹಲವಾರು ವರ್ಷಗಳಿಂದ ಕತಾರ್ ನಲ್ಲಿ ವಾಸಿಸುತ್ತಿದ್ದು, ಅಲ್ಲಿನ ಕ್ರೀಡೆ ಹಾಗೂ ಸಂಸ್ಕೃತಿಕ ಸಂಘಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಮಾಜಮುಖಿ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿರುವ ಬಿ. ಆರ್. ಸತೀಶ್ ಅಲ್ಲಿನ ಅನಿವಾಸಿ ಭಾರತೀಯರ ಮೋಸ್ಟ್ ಫೇವರಿಟ್ ವ್ಯಕ್ತಿ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
'ಬದುಕು ಹಾಗೂ ಬದುಕಲು ಬಿಡು' ಎಂಬುವುದನ್ನು ತನ್ನ ಜೀವನದಲ್ಲಿ ಅಳವಡಿಸಿಕೊಂಡು ಬದುಕುತ್ತಿರುವ ಬಿ. ಆರ್. ಸತೀಶ್ ರವರ ಸೇವೆಯನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳು ಸನ್ಮಾನಿಸಿವೆ. ಅದರಲ್ಲೂ ವಿಶೇಷವಾಗಿ ಸಂಘಟಕರನ್ನು ಪ್ರೋತ್ಸಾಹಿಸುವುದರೊಂದಿಗೆ ತನ್ನಿಂದಾಗುವ ಸಹಾಯ ಮಾಡುತ್ತಾರೆ. ಅನಿವಾಸಿ ಭಾರತೀಯರ ಪ್ರತಿಭೆ ಗುರುತಿಸಿ ಅವರನ್ನು ಬೆಂಬಲಿಸಿ ಮುಂದೊಯ್ಯುತ್ತಾರೆ.
ತಾಯ್ನಾಡಿನಿಂದ ದೂರವಿದ್ದರೂ, ಅಲ್ಲಿದ್ದುಕೊಂಡೇ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಬಿ. ಅರ್ ಸತೀಶ್ ರವರ ಈ ಸೇವೆಗಾಗಿ 'ಆರ್ಯಭಟ ಇಂಟರ್ ನ್ಯಾಷನಲ್ ಅವಾರ್ಡ್' ಮೂಲಕ ಅಭಿನಂದಿಸಲಾಗಿದೆ.
