ಬಹ್ರೇನ್ನಲ್ಲಿ ಪಸರಿಸಿದ ಕಸ್ತೂರಿ ಕನ್ನಡದ ಕಂಪು!
ಹೊರ ದೇಶದಲ್ಲಿ ಪಸರಿಸಿದ ಕನ್ನಡದ ಕಂಪು! ಬಹ್ರೇನ್ ನಲ್ಲಿ ಅಂತರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನ! ಬಹ್ರೇನ್ ರಾಜಧಾನಿ ಮನಾಮದಲ್ಲಿರುವ ದಿ ಇಂಡಿಯನ್ ಕ್ಲಬ್
ಬೆಂಗಳೂರು(ಅ.5): ಇತಿಹಾಸದಲ್ಲೇ ಇದೇ ಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಪರಿಷತ್ ನಿಂದ ಹೊರದೇಶದಲ್ಲಿ ಅಂತರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದೆ. ದ್ವೀಪ ರಾಷ್ಟ್ರ ಬಹ್ರೇನ್ ರಾಜಧಾನಿ ಮನಾಮದಲ್ಲಿರುವ ದಿ ಇಂಡಿಯನ್ ಕ್ಲಬ್ ನಲ್ಲಿ ಅಕ್ಟೋಬರ್ 5 ಹಾಗೂ 6 ಸಮ್ಮೇಳನ ಆಯೋಜಿಸಲಾಗಿದೆ. ಬಹ್ರೇನ್ ಕನ್ನಡ ಸಂಘದ ಸಹಕಾರದೊಂದಿಗೆ ಕನ್ನಡ ಸಾಹಿತ್ಯ ಪರಿಷತ್, ಹಂಪಿ ಕನ್ನಡ ವಿವಿ ಆಯೋಜಿಸಿರುವ ಸಮ್ಮೇಳನದಲ್ಲಿ ಕರ್ನಾಟಕದಿಂದ ಖ್ಯಾತ ಕವಿಗಳು, ಲೇಖಕರು ಭಾಗವಹಿಸುತ್ತಿದ್ದಾರೆ. ಕನ್ನಡ ಸಮ್ಮೇಳನಕ್ಕೆ ಗಲ್ಫ್ ದೇಶಗಳಲ್ಲಿ ನೆಲೆಸಿರೋ ಸಾವಿರಾರು ಅನಿವಾಸಿ ಕನ್ನಡಿಗರ ಸಾಕ್ಷಿಯಾಗಲಿದ್ದಾರೆ.