ಡೇವಿಸ್ ಕಪ್ ತಂಡಕ್ಕೆ ನಾನೇ ನಾಯಕ ಎಂದು ಮಹೇಶ್ ಭೂಪತಿ ಪಟ್ಟುಹಿಡಿದಿದ್ದಾರೆ. ಪಾಕಿಸ್ತಾನದಲ್ಲಿ ಡೇವಿಸ್ ಕಪ್ ಆಡಲು ಹಿಂದೆ ಸರಿದ ಬೆನ್ನಲ್ಲೇ ಅಖಿಲ ಭಾರತೀಯ ಟೆನಿಸ್ ಫೆಡರೇಷನ್ ರೋಹಿತ್ ರಾಜ್‌ಪಾಲ್‌ ಅವರಿಗೆ ನಾಯಕತ್ವ ಪಟ್ಟ ನೀಡಲಾಗಿತ್ತು. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ನವದೆಹಲಿ(ನ.07): ಭಾರತ ಡೇವಿಸ್ ಕಪ್ ತಂಡದ ನಾಯಕ ಯಾರು ಎನ್ನುವ ವಿವಾದ ತಾರಕಕ್ಕೇರಿದೆ. ಅಖಿಲ ಭಾರತ ಟೆನಿಸ್ ಫೆಡರೇಷನ್ (ಎಐಟಿಎ), ಪಾಕಿಸ್ತಾನ ವಿರುದ್ಧ ನ.29-30ರಂದು ನಡೆಯುವ ಪಂದ್ಯಕ್ಕೆ ತನ್ನ ಆಯ್ಕೆಗಾರ ರೋಹಿತ್ ರಾಜ್‌ಪಾಲ್‌ರನ್ನು ಆಡದ ನಾಯಕನನ್ನಾಗಿ ಆಯ್ಕೆ ಮಾಡಿದ ಬಳಿಕ ಮಹೇಶ್ ಭೂಪತಿ ಈಗಲೂ ತಂಡದ ನಾಯಕ ನಾನೇ ಎಂದು ಪಟ್ಟು ಹಿಡಿದಿದ್ದಾರೆ.

Add Asianetnews Kannada as a Preferred SourcegooglePreferred

ಡೇವಿಸ್‌ ಕಪ್‌: ಪಾಕ್‌ಗೆ ತೆರ​ಳ​ಲಿ​ದ್ದಾರೆ ಪೇಸ್‌!

ಭೂಪತಿ, ಪಾಕಿಸ್ತಾನಕ್ಕೆ ತೆರಳುವುದಿಲ್ಲ ಎಂದು ಸ್ಪಷ್ಟಪಡಿಸಿದ ನಂತರ ಎಐಟಿಎ ಸೋಮವಾರ ರೋಹಿತ್‌ರನ್ನು ನಾಯಕನನ್ನಾಗಿ ಆಯ್ಕೆ ಮಾಡಿತು. ಆದರೆ ಸೋಮವಾರ ರಾತ್ರಿ ಅಂತಾರಾಷ್ಟ್ರೀಯ ಟೆನಿಸ್ ಫೆಡರೇಷನ್ (ಐಟಿಎಫ್), ಪಂದ್ಯವನ್ನು ತಟಸ್ಥ ಸ್ಥಳಕ್ಕೆ ಸ್ಥಳಾಂತರಿಸಿರುವುದಾಗಿ ಪ್ರಕಟಣೆ ನೀಡಿತು.

ಡೇವಿಸ್ ಕಪ್: ತಟಸ್ಥ ಸ್ಥಳ​ದಲ್ಲಿ ಇಂಡೋ-ಪಾಕ್ ಟೆನಿಸ್‌ ಪಂದ್ಯ

2018ರ ಡಿಸೆಂಬರ್‌ನಲ್ಲಿ ಭೂಪತಿ ಗುತ್ತಿಗೆ ಮುಕ್ತಾಯಗೊಂಡಿತ್ತು. ಈ ವರ್ಷ ಫೆಬ್ರವರಿಯಲ್ಲಿ ನಡೆದ ಇಟಲಿ ವಿರುದ್ಧದ ಪಂದ್ಯದ ವರೆಗೂ ಅವರ ಗುತ್ತಿಗೆ ಅವಧಿ ವಿಸ್ತರಿಸಲಾಗಿತ್ತು. ಆದರೆ ಅವರನ್ನು ನಾಯಕತ್ವದಿಂದ ಕೆಳಗಿಳಿಸಿರುವ ಬಗ್ಗೆ ಎಐಟಿಎ ಪ್ರಕಟಿಸಿಲ್ಲ. ಸದ್ಯದ ಬೆಳವಣಿಗೆ ಬಗ್ಗೆ ಭೂಪತಿ ಟ್ವೀಟ್ ಮಾಡಿದ್ದು, ‘ನಾನು ಭದ್ರತಾ ಸಮಸ್ಯೆಯಿಂದಾಗಿ ಪಾಕಿಸ್ತಾನಕ್ಕೆ ಹೋಗದಿರಲು ನಿರ್ಧರಿಸಿದೆ ಹೊರತು ದೇಶಕ್ಕಾಗಿ ಆಡಲು ನಿರಾಕರಿಸಿಲ್ಲ. ತಟಸ್ಥ ಸ್ಥಳದಲ್ಲಿ ಪಂದ್ಯ ನಡೆಸಲು ಐಟಿಎಫ್ ನಿರ್ಧರಿಸಿದ ಬಳಿಕ ಎಐಟಿಎ ನನ್ನನ್ನು ಸಂಪರ್ಕಿಸಿಲ್ಲ. ಹೀಗಾಗಿ ಈಗಲೂ ಭಾರತ ತಂಡದ ನಾಯಕ ನಾನೇ ಎಂದು ನಂಬಿದ್ದೇನೆ’ ಎಂದು ಬರೆದಿದ್ದಾರೆ.

Scroll to load tweet…

ಮಂಗಳವಾರ ಭಾರತ ತಂಡದ ಹಿರಿಯ ಆಟಗಾರ ರೋಹನ್ ಬೋಪಣ್ಣ, ನಾಯಕತ್ವ ಬದಲಾವಣೆ ಮಾಡುವ ಮೊದಲು ಎಐಟಿಎ ಆಟಗಾರರನ್ನು ಸಂಪರ್ಕಿಸಿಲ್ಲ ಎನ್ನುವ ಕಾರಣಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು.