* ಭಾರತ ಟೇಬಲ್‌ ಟೆನಿಸ್‌ ಒಕ್ಕೂಟದ ಎದುರು ಮನಿಕಾ ಬಾತ್ರಾ(Manika Batra)ಗೆ ಗೆಲುವು* ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಗೊಳ್ಳಲು ರಾಷ್ಟ್ರೀಯ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳುವುದು ಕಡ್ಡಾಯ ಆದೇಶಕ್ಕೆ ಕೋರ್ಟ್‌ ತಡೆಯಾಜ್ಞೆ* ರಾಷ್ಟ್ರೀಯ ಕೋಚ್ ವಿರುದ್ದ ತನಿಖೆ ನಡೆಸುವಂತೆ ಡೆಲ್ಲಿ ಹೈಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಸೂಚನೆ

ನವದೆಹಲಿ(ಸೆ.24): ಮುಂಬರುವ ಯಾವುದೇ ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಗೊಳ್ಳಲು ರಾಷ್ಟ್ರೀಯ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳುವುದು ಕಡ್ಡಾಯ ಎಂದು ಭಾರತೀಯ ಟೇಬಲ್‌ ಟೆನಿಸ್‌(Table Tennis) ಒಕ್ಕೂಟ (ಟಿಟಿಎಫ್‌ಐ) ಹೊರಡಿಸಿದ್ದ ಆದೇಶವನ್ನು ದೆಹಲಿ ಹೈಕೋರ್ಟ್‌(Delhi High Court ) ತಡೆ ಹಿಡಿದಿದೆ. ಜತೆಗೆ ಟಿಟಿಎಫ್‌ಐ ವಿರುದ್ಧ ಖ್ಯಾತ ಟೇಬಲ್‌ ಟೆನಿಸ್‌ ಪಟು ಮನಿಕಾ ಬಾತ್ರಾ(Manika Batra) ಮಾಡಿರುವ ಆರೋಪದ ತನಿಖೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

Add Asianetnews Kannada as a Preferred SourcegooglePreferred

ರಾಷ್ಟ್ರೀಯ ಶಿಬಿರದಲ್ಲಿ ಪಾಲ್ಗೊಂಡಿರಲಿಲ್ಲ ಎಂಬ ಕಾರಣಕ್ಕೆ ತಮ್ಮನ್ನು ಏಷ್ಯನ್‌ ಟೇಬಲ್‌ ಟೆನಿಸ್‌ ಚಾಂಪಿಯನ್‌ಶಿಪ್‌ನಿಂದ ಕೈಬಿಟ್ಟಿರುವುದನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

Scroll to load tweet…

ಕೋಚ್‌ ಸೌಮ್ಯದೀಪ್‌ ಫಿಕ್ಸಿಂಗ್‌ ಮಾಡು ಎಂದಿದ್ದರು: ಮನಿಕಾ ಬಾತ್ರಾ ಅಚ್ಚರಿಯ ಹೇಳಿಕೆ!

Scroll to load tweet…

ಟೋಕಿಯೋ ಒಲಿಂಪಿಕ್ಸ್‌(Tokyo Olympics) ವೇಳೆ ರಾಷ್ಟ್ರೀಯ ಕೋಚ್‌ ಸೌಮ್ಯದೀಪ್‌ ರಾಯ್‌ಗೆ ಪಂದ್ಯದ ವೇಳೆ ಕೋರ್ಟ್‌ ಪಕ್ಕದಲ್ಲಿ ಕುಳಿತುಕೊಳ್ಳಲು ಬಿಡದೆ ಅಶಿಸ್ತು ಪ್ರದರ್ಶಿಸಿದ್ದಾರೆ ಎಂದು ಟಿಟಿಎಫ್‌ಐ ಈ ಮುನ್ನ, ಮನಿಕಾಗೆ ನೋಟಿಸ್‌ ನೀಡಿತ್ತು. ಇದಕ್ಕೆ ಪ್ರತಿಯಾಗಿ ಮನಿಕಾ, ಈ ಹಿಂದೆ ಒಲಿಂಪಿಕ್ಸ್‌ ಅರ್ಹತಾ ಸುತ್ತಿನ ವೇಳೆ ಸೌಮ್ಯದೀಪ್‌ ತನಗೆ ಪಂದ್ಯ ಕೈಚೆಲ್ಲುವಂತೆ ಹೇಳಿದ್ದರು. ತಮ್ಮ ಅಕಾಡೆಮಿಯ ವಿದ್ಯಾರ್ಥಿನಿ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಲು ಈ ಫಿಕ್ಸಿಂಗ್‌ ಆಮಿಷ ಒಡ್ಡಿದ್ದರು ಮನಿಕಾ ಆರೋಪಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು, ರಾಷ್ಟ್ರೀಯ ಕೋಚ್‌ ವಿರುದ್ಧ ಬಾತ್ರಾ ಮಾಡಿರುವ ಆರೋಪದ ಕುರಿತು ತನಿಖೆ ನಡೆಸಿ, 4 ವಾರದೊಳಗೆ ವರದಿ ಸಲ್ಲಿಸುವಂತೆ ಸೂಚಿಸಿತು. ಜತೆಗೆ ರಾಷ್ಟ್ರೀಯ ಶಿಬಿರದಲ್ಲಿ ಪಾಲ್ಗೊಳ್ಳುವಿಕೆ ಕಡ್ಡಾಯ ಎಂಬ ಆದೇಶಕ್ಕೂ ತಡೆಯಾಜ್ಞೆ ನೀಡಿತು.