ಇದೇ ತಿಂಗಳು 16ರಂದು ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ. 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 20ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಜೂ.3ರಂದು ಮತದಾನ ನಡೆಯಲಿದ್ದು, ಜೂ.6ರಂದು ಮತ ಎಣಿಕೆ ನಡೆಯಲಿದೆ.

ಬೆಂಗಳೂರು(ಮೇ.14):  ಮೇಲ್ಮನೆ ಚುನಾವಣೆಗೆ ಘಟಾನುಘಟಿ ನಾಯಕರು ಸೇರಿದಂತೆ ಸೋಮವಾರ 11 ಅಭ್ಯರ್ಥಿಗಳು 17 ನಾಮಪತ್ರಗಳನ್ನು ಸಲ್ಲಿಕೆ ಮಾಡಿದ್ದಾರೆ. ಅಧಿಸೂಚನೆ ಪ್ರಕಟಗೊಂಡ ಬಳಿಕ ಈವರೆಗೆ 13 ಅಭ್ಯರ್ಥಿಗಳು 19 ಉಮೇದುವಾರಿಕೆ ಸಲ್ಲಿಸಿದ್ದಾರೆ.

Add Asianetnews Kannada as a Preferred SourcegooglePreferred

ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ, ಕಾಂಗ್ರೆಸ್‌ ಅಭ್ಯರ್ಥಿಯಾಗಿ ರಾಮೋಜಿಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ, ಕಾಂಗ್ರೆಸ್‌ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ.

ಪರಿಷತ್‌ ಚುನಾವಣೆ: ಕಾಂಗ್ರೆಸ್ ಗೆಲ್ಲಿಸಿಕೊಂಡು ಬರುವಂತೆ ಮೂವರು ಶಿಕ್ಷಣ ಸಚಿವರಿಗೆ ಸೂಚನೆ

ಸೋಮವಾರ ಸಲ್ಲಿಕೆಯಾದ 17 ನಾಮಪತ್ರಗಳ ಪೈಕಿ ಬಿಜೆಪಿ 3, ಕಾಂಗ್ರೆಸ್‌ 2, ಜೆಡಿಎಸ್‌ 1, ಪಕ್ಷೇತರರ 5 ಉಮೇದುವಾರಿಕೆ ಸಲ್ಲಿಕೆಯಾಗಿವೆ. ಇನ್ನು, ಈವರೆಗೆ ಸಲ್ಲಿಯಾದ 19 ನಾಮಪತ್ರಗಳ ಪೈಕಿ ಬಿಜೆಪಿ 3, ಕಾಂಗ್ರೆಸ್‌ 2, ಜೆಡಿಎಸ್‌ 1, ಪಕ್ಷೇತರರ 7 ನಾಮಪತ್ರಗಳು ಸಲ್ಲಿಕೆಯಾಗಿವೆ.

ಇದೇ ತಿಂಗಳು 16ರಂದು ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ. 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 20ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಜೂ.3ರಂದು ಮತದಾನ ನಡೆಯಲಿದ್ದು, ಜೂ.6ರಂದು ಮತ ಎಣಿಕೆ ನಡೆಯಲಿದೆ.