ರಾಜ್ಯಸಭಾ ಚುನಾವಣೆಗೆ ದಿನಗಣನೆ| ಕಾಂಗ್ರೆಸ್‌ ಶಾಸಕರ ರಾಜೀನಾಮೆ|  ಬಿಜೆಪಿ ಹಾದಿ ಸುಗಮ

ಗಾಂಧಿನಗರ[ಮಾ.17]: ರಾಜ್ಯಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಾಗಲೇ, ಗುಜರಾತ್‌ ಕಾಂಗ್ರೆಸ್‌ ಶಾಸಕನೋರ್ವ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ, ಭಾನುವಾರ ಆರಂಭವಾದ ಕಾಂಗ್ರೆಸ್‌ ಶಾಸಕರ ರಾಜೀನಾಮೆ ಪರ್ವ 5ಕ್ಕೆ ಏರಿದೆ.

Add Asianetnews Kannada as a Preferred SourcegooglePreferred

ಅಲ್ಲದೆ, ಐವರು ಕಾಂಗ್ರೆಸ್‌ ಶಾಸಕರ ರಾಜೀನಾಮೆಯನ್ನು ಅನುಮೋದಿಸಿದ್ದಾಗಿ ಗುಜರಾತ್‌ ವಿಧಾನಸಭಾ ಸ್ಪೀಕರ್‌ ರಾಜೇಂದ್ರ ತ್ರಿವೇದಿ ಅವರು ಸದನಕ್ಕೆ ತಿಳಿಸಿದ್ದಾರೆ. ಈ ಮೂಲಕ ಗುಜರಾತ್‌ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ 3 ಸ್ಥಾನಗಳನ್ನು ಗೆಲ್ಲಬೇಕೆಂಬ ಬಿಜೆಪಿ ಹಾದಿ ಸುಗಮವಾಗಿದೆ.

ಗುಜರಾತ್‌ ಶಾಸಕರ ಸಂಖ್ಯಾಬಲದ ಪ್ರಕಾರ ಬಿಜೆಪಿ ಮತ್ತು ಕಾಂಗ್ರೆಸ್‌ ತಲಾ 2 ಸ್ಥಾನ ಗೆಲ್ಲುವ ಸಾಮರ್ಥ್ಯ ಹೊಂದಿದ್ದವು. ಆದರೆ, ಬಿಜೆಪಿ ಮೂರು ಸ್ಥಾನಗಳನ್ನು ಗೆಲ್ಲಬೇಕಾದರೆ, ಕಾಂಗ್ರೆಸ್‌ನ 5 ಶಾಸಕರನ್ನು ತನ್ನತ್ತ ಸೆಳೆಯಬೇಕಿತ್ತು ಅಥವಾ ಶಾಸಕರ ರಾಜೀನಾಮೆ ಕೊಡಿಸಿ ಕಾಂಗ್ರೆಸ್‌ ಸಂಖ್ಯಾಬಲ ಕುಗ್ಗಿಸಬೇಕಿತ್ತು. ಕಾಂಗ್ರೆಸ್‌ನ ಐವರು ಶಾಸಕರ ರಾಜೀನಾಮೆ ಮೂಲಕ ಬಿಜೆಪಿಯ ಹಾದಿ ಸುಗಮವಾಗಿದೆ.