ಖ್ಯಾತ ತೆಲುಗು ನಟಿ ವಿಜಯಶಾಂತಿ ಸೋಮವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆ| ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾರ್ಯದರ್ಶಿ ಅರುಣ್‌ ಸಿಂಗ್‌ ಹಾಗೂ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಕಿಶನ್‌ ರೆಡ್ಡಿ ಸಮ್ಮುಖದಲ್ಲಿ ಕೇಸರಿ ಪಕ್ಷಕ್ಕೆ ಸೇರ್ಪಡೆ

ನವದೆಹಲಿ(ಡಿ.08): ಖ್ಯಾತ ತೆಲುಗು ನಟಿ ವಿಜಯಶಾಂತಿ ಸೋಮವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾರ್ಯದರ್ಶಿ ಅರುಣ್‌ ಸಿಂಗ್‌ ಹಾಗೂ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಕಿಶನ್‌ ರೆಡ್ಡಿ ಸಮ್ಮುಖದಲ್ಲಿ ಕೇಸರಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Add Asianetnews Kannada as a Preferred SourcegooglePreferred

ಆ ಮೂಲಕ ಸುಮಾರು ಎರಡು ದಶಕಗಳ ಬಳಿಕ ಮತ್ತೆ ತಮ್ಮ ಮಾತೃ ಪಕ್ಷವನ್ನು ಮತ್ತೆ ಸೇರಿದ್ದಾರೆ. ಬಳಿಕ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದರು. ಬಳಿಕ ಮಾತನಾಡಿದ ಅವರು, ತೆಲಂಗಾಣದ ಜನರ ಆಶೋತ್ತರಗಳನ್ನು ಪೂರೈಸಲು ಬಿಜೆಪಿಯಿಂದ ಮಾತ್ರ ಸಾಧ್ಯ. ಟಿ.ಆರ್‌.ಎಸ್‌ ಜನರ ಬೇಡಿಕೆಗಳಿಗೆ ಸ್ಪಂದಿಸಲು ವಿಫಲವಾಗಿದೆ ಎಂದು ಹೇಳಿದ್ದಾರೆ.

1997ರಲ್ಲಿ ಬಿಜೆಪಿ ಮೂಲಕವೇ ರಾಜಕೀಯ ಪ್ರವೇಶಿಸಿದ್ದ ಅವರು, ಪ್ರತ್ಯೇಕ ತೆಲಂಗಾಣ ಹೋರಾಟದ ವೇಳೆ ಕೆ. ಚಂದ್ರಶೇಖರ್‌ ರಾವ್‌ ಅವರೊಂದಿಗೆ ಕಾಣಿಸಿಕೊಂಡಿದ್ದರು. 2009-2014ರ ವರೆಗೆ ಟಿಆರ್‌ಎಸ್‌ನಿಂದ ಮೇದಕ್‌ ಕ್ಷೇತ್ರದ ಸಂಸದೆಯಾಗಿದ್ದ ಅವರು, 2014ರಲ್ಲಿ ಕಾಂಗ್ರೆಸ್‌ ಸೇರಿದ್ದರು.