Asianet Suvarna News Asianet Suvarna News

ಅಚ್ಚರಿ ಮೂಡಿಸಿದ ಬೆಂಗ್ಳೂರು ಸೆಂಟ್ರಲ್ ಅಭ್ಯರ್ಥಿ ಪ್ರಕಾಶ್ ರೈ-ಕೇಜ್ರಿವಾಲ್ ಭೇಟಿ..!

ಮುಂಬರುವ ಲೋಕಸಭೆ ಚುನಾವಣೆಗೆ ಬೆಂಗಳೂರು ಸೆಂಟ್ರಲ್ ನಿಂದ ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ನಟ ಪ್ರಕಾಶ್ ರೈ ಆಪ್ ವರಿಷ್ಠರನ್ನು ಭೇಟಿ ಮಾಡಿರುವುದು ಹಲವು ಕುತೂಹಲಗಳಿಗೆ ಕಾರಣವಾಗಿದೆ.

Actor Prakash Raj meets Delhi Chief Minister Arvind Kejriwal
Author
Bengaluru, First Published Jan 10, 2019, 6:53 PM IST

ನವದೆಹಲಿ, [ಜ.10]: ನಟ ಪ್ರಕಾಶ್ ರೈ ವರು ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಅವರನ್ನ ಭೇಟಿ ಮಾಡಿದ್ದಾರೆ.

ಇಂದು [ಗುರುವಾರ]  ಪ್ರಕಾಶ್ ರೈ ಅವರು ದೆಹಲಿಯಲ್ಲಿರುವ ಅರವಿಂದ್ ಕೇಜ್ರಿವಾಲ್​ ಅವರ  ನಿವಾಸಕ್ಕೆ ಭೇಟಿ ನೀಡಿ ಕೆಲ ಕಾಲ ಮಾತುಕತೆ ನಡೆಸಿದರು. 

ಪಕ್ಷೇತರ ಅಭ್ಯರ್ಥಿಯಾಗಿ ಪ್ರಕಾಶ್ ರೈ ಸ್ಪರ್ಧೆ : ಕ್ಷೇತ್ರವೂ ಬಹಿರಂಗ..!

ಈ ಬಗ್ಗೆ ಆಪ್,​ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ನಟ ಪ್ರಕಾಶ್ ರೈ, ದೆಹಲಿ ಸಿಎಂ ಹಾಗೂ ಆಪ್ ವರಿಷ್ಠ ಅರವಿಂದ್ ಕೇಜ್ರಿವಾಲ್​ ಅವರನ್ನ ಭೇಟಿ ಆದರು. ಈ ವೇಳೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಿತು ಎಂದು ತಿಳಿಸಿದೆ. 

ಸದ್ಯ ಪ್ರಕಾಶ್ ರೈ ಯಾಕೆ ಅರವಿಂದ್ ಕೇಜ್ರಿವಾಲ್​ರನ್ನು ಭೇಟಿಯಾದರು?  ಯಾವೆಲ್ಲಾ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು ? ಅನ್ನೋದರ ಬಗ್ಗೆ ಅಚ್ಚರಿ ಮೂಡಿಸಿದೆ.

ಲೋಕಸಭಾ ಚುನಾವಣೆಗೆ ಪ್ರಕಾಶ್ ರೈ ಸ್ಪರ್ಧೆ!: ಯಾವ ಪಕ್ಷ, ಕ್ಷೇತ್ರದಿಂದ ಸ್ಪರ್ಧಿಸ್ತಾರೆ?

ಈಗಾಗಲೇ ಬೆಂಗಳೂರು ಕೇಂದ್ರದಿಂದ ಲೋಕಸಭೆ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಪ್ರಕಾಶ್ ರೈ ಘೋಷಿಸಿದ್ದಾರೆ. 

ಇನ್ನು ಲೋಕಸಭಾ ಚುನಾವಣೆಯಲ್ಲಿ ಪ್ರಕಾಶ್ ರೈಗೆ ಬೆಂಬಲ ನೀಡುತ್ತೇವೆಂದು ಈಗಾಗಲೇ ಕರ್ನಾಟಕ ರಾಜ್ಯ ಆಪ್ ಘೋಷಿಸಿದೆ.

ಈ ಬಗ್ಗೆ ಏನಾದ್ರೂ ಚರ್ಚೆ ಮಾಡಿರುವ ಸಾಧ್ಯತೆಗಳಿವೆ. ಒಟ್ಟಿನಲ್ಲಿ ಲೋಕಸಭಾ ಎಲೆಕ್ಷನ್ ಹತ್ತಿರವಾಗುತ್ತಿದ್ದಂತೆ ರೈ ತ್ತ-ಇತ್ತ ಓಡಾಡುತ್ತಿದ್ದು, ಇದೀಗ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿರುವುದು ಹಲವು ಅಚ್ಚರಿಗಳಿಗೆ ಕಾರಣವಾಗಿದೆ.

Follow Us:
Download App:
  • android
  • ios