ಅಚ್ಚರಿ ಮೂಡಿಸಿದ ಬೆಂಗ್ಳೂರು ಸೆಂಟ್ರಲ್ ಅಭ್ಯರ್ಥಿ ಪ್ರಕಾಶ್ ರೈ-ಕೇಜ್ರಿವಾಲ್ ಭೇಟಿ..!
ಮುಂಬರುವ ಲೋಕಸಭೆ ಚುನಾವಣೆಗೆ ಬೆಂಗಳೂರು ಸೆಂಟ್ರಲ್ ನಿಂದ ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ನಟ ಪ್ರಕಾಶ್ ರೈ ಆಪ್ ವರಿಷ್ಠರನ್ನು ಭೇಟಿ ಮಾಡಿರುವುದು ಹಲವು ಕುತೂಹಲಗಳಿಗೆ ಕಾರಣವಾಗಿದೆ.
ನವದೆಹಲಿ, [ಜ.10]: ನಟ ಪ್ರಕಾಶ್ ರೈ ವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನ ಭೇಟಿ ಮಾಡಿದ್ದಾರೆ.
ಇಂದು [ಗುರುವಾರ] ಪ್ರಕಾಶ್ ರೈ ಅವರು ದೆಹಲಿಯಲ್ಲಿರುವ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿ ಕೆಲ ಕಾಲ ಮಾತುಕತೆ ನಡೆಸಿದರು.
ಪಕ್ಷೇತರ ಅಭ್ಯರ್ಥಿಯಾಗಿ ಪ್ರಕಾಶ್ ರೈ ಸ್ಪರ್ಧೆ : ಕ್ಷೇತ್ರವೂ ಬಹಿರಂಗ..!
ಈ ಬಗ್ಗೆ ಆಪ್, ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ನಟ ಪ್ರಕಾಶ್ ರೈ, ದೆಹಲಿ ಸಿಎಂ ಹಾಗೂ ಆಪ್ ವರಿಷ್ಠ ಅರವಿಂದ್ ಕೇಜ್ರಿವಾಲ್ ಅವರನ್ನ ಭೇಟಿ ಆದರು. ಈ ವೇಳೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಿತು ಎಂದು ತಿಳಿಸಿದೆ.
We need people like Prakash Raj to enter Parliament.
— Arvind Kejriwal (@ArvindKejriwal) January 10, 2019
Prakash ji, it was great meeting u today. AAP fully supports u and we agree wid ur decision to fight as an independent candidate. We need independent and non-partisan voices too in Parliament. https://t.co/M0LO376dG7
ಸದ್ಯ ಪ್ರಕಾಶ್ ರೈ ಯಾಕೆ ಅರವಿಂದ್ ಕೇಜ್ರಿವಾಲ್ರನ್ನು ಭೇಟಿಯಾದರು? ಯಾವೆಲ್ಲಾ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು ? ಅನ್ನೋದರ ಬಗ್ಗೆ ಅಚ್ಚರಿ ಮೂಡಿಸಿದೆ.
ಲೋಕಸಭಾ ಚುನಾವಣೆಗೆ ಪ್ರಕಾಶ್ ರೈ ಸ್ಪರ್ಧೆ!: ಯಾವ ಪಕ್ಷ, ಕ್ಷೇತ್ರದಿಂದ ಸ್ಪರ್ಧಿಸ್ತಾರೆ?
ಈಗಾಗಲೇ ಬೆಂಗಳೂರು ಕೇಂದ್ರದಿಂದ ಲೋಕಸಭೆ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಪ್ರಕಾಶ್ ರೈ ಘೋಷಿಸಿದ್ದಾರೆ.
ಇನ್ನು ಲೋಕಸಭಾ ಚುನಾವಣೆಯಲ್ಲಿ ಪ್ರಕಾಶ್ ರೈಗೆ ಬೆಂಬಲ ನೀಡುತ್ತೇವೆಂದು ಈಗಾಗಲೇ ಕರ್ನಾಟಕ ರಾಜ್ಯ ಆಪ್ ಘೋಷಿಸಿದೆ.
ಈ ಬಗ್ಗೆ ಏನಾದ್ರೂ ಚರ್ಚೆ ಮಾಡಿರುವ ಸಾಧ್ಯತೆಗಳಿವೆ. ಒಟ್ಟಿನಲ್ಲಿ ಲೋಕಸಭಾ ಎಲೆಕ್ಷನ್ ಹತ್ತಿರವಾಗುತ್ತಿದ್ದಂತೆ ರೈ ತ್ತ-ಇತ್ತ ಓಡಾಡುತ್ತಿದ್ದು, ಇದೀಗ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿರುವುದು ಹಲವು ಅಚ್ಚರಿಗಳಿಗೆ ಕಾರಣವಾಗಿದೆ.