ಜೆಡಿಎಸ್‌ ಬಾಗಿಲು ತೆರೆದಿದೆ. ಯಾರು ಬೇಕಾದರೂ ನಮ್ಮ ಪಕ್ಷಕ್ಕೆ ಬರಬಹುದು, ಯಾರು ಬೇಕಾದರೂ ಪಕ್ಷದಿಂದ ಹೋಗಬಹುದು ನಾವು ಯಾವುದಕ್ಕೂ ತಲೆ ಕೆಡಿಸಿಕೊಳ್ಳೊಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ 

ತುರುವೇಕೆರೆ (ಆ.21): ಜೆಡಿಎಸ್‌ ಬಾಗಿಲು ತೆರೆದಿದೆ. ಯಾರು ಬೇಕಾದರೂ ನಮ್ಮ ಪಕ್ಷಕ್ಕೆ ಬರಬಹುದು, ಯಾರು ಬೇಕಾದರೂ ಪಕ್ಷದಿಂದ ಹೋಗಬಹುದು. ನಾವು ಯಾವುದಕ್ಕೂ ತಲೆ ಕೆಡಿಸಿಕೊಳ್ಳೊಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಜಿಲ್ಲೆಯಲ್ಲಿ ಕೆಲವು ಜೆಡಿಎಸ್‌ ಮುಖಂಡರು ಪಕ್ಷ ಬಿಡುತ್ತಿದ್ದಾರೆ ಎಂಬ ಶಂಕೆ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾಯಕರಿಂದ ಜೆಡಿಎಸ್‌ ಇಲ್ಲ. ಸಾಮಾನ್ಯ ಕಾರ್ಯಕರ್ತರಿಂದ ಪಕ್ಷ ಇದೆ ಎಂದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಉತ್ತರಿಸಿದ ಅವರು ವಿಧಾನ ಪರಿಷತ್‌ ಸದಸ್ಯರೇ ಆಗಲಿ, ಹಾಲಿ ಶಾಸಕರೇ ಆಗಲಿ ಪಕ್ಷ ಬಿಟ್ಟರೇ ನಷ್ಟವೇನೂ ಇಲ್ಲ. ಪಕ್ಷದಿಂದ ಎಲ್ಲವನ್ನೂ ಪಡೆದು ಪಕ್ಷಕ್ಕೇ ದ್ರೋಹ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಬೆಮಲ್‌ ಕಾಂತರಾಜು ಮತ್ತು ಗುಬ್ಬಿ ಶಾಸಕ ಶ್ರೀನಿವಾಸ್‌ ಅವರ ಹೆಸರು ಹೇಳದೇ ಪರೋಕ್ಷವಾಗಿ ಟಾಂಗ್‌ ನೀಡಿದರು.

ಮುಂದಿನ ಚುನಾವಣೆಗೆ ಜೆಡಿಎಸ್‌ ಮಿಷನ್‌-123: ಎಚ್‌ ಡಿ ಕುಮಾರಸ್ವಾಮಿ

ಪಕ್ಷಕ್ಕೆ ದ್ರೋಹ ಮಾಡಿದವರು ಈಗ ಜೆಡಿಎಸ್‌ ಹೆಸರು ಹೇಳಿ ಬಂದರೆ ಜೆಡಿಎಸ್‌ ಕಾರ್ಯಕರ್ತರು ಸರಿಯಾಗಿ ಬುದ್ಧಿ ಕಲಿಸಲಿದ್ದಾರೆ. ಇವರಾರ‍ಯರಿಂದಲೂ ಪಕ್ಷ ಇಲ್ಲ. ಎಲ್ಲವೂ ಕಾರ್ಯಕರ್ತರಿಂದ ಎಂಬುದನ್ನು ಮನಗಾಣಲಿ ಎಂದರು.

ಇನ್ನು ನಮ್ಮ ಪಕ್ಷದ ಹಲವರು ಶಾಕ್‌ ಕೊಟ್ಟು ಬೇರೆ ಪಕ್ಷಕ್ಕೆ ಹೋಗ್ತಾರೆ ಅಂತೆಲ್ಲಾ ಸುದ್ದಿಯಾಗುತ್ತಿದೆ. ನಮ್ಮ ಪಕ್ಷ ಬಿಟ್ಟು ಹೋಗುತ್ತಿರುವವರ ಕರೆಂಟ್‌ ಅನ್ನು ನಾವು ಕಿತ್ತು ಹಾಕಿದ್ದೇವೆ. ಅವರಲ್ಲೇ ಕರೆಂಟ್‌ ಇಲ್ಲ. ಇನ್ನು ಶಾಕ್‌ ಎಲ್ಲಿಯ ಮಾತು ಎಂದು ನಗೆ ಎಬ್ಬಿಸಿದರು.