ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿಯ ದ.ಕ ಬಿಜೆಪಿ ಜಿಲ್ಲಾ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಮಾಧ್ಯಮದವರ ಮೇಲೆ ಗೂಂಡಾಗಿರಿ ಪ್ರದರ್ಶಿಸಿದ್ದಾರೆ. ಪುತ್ತಿಲ ಪರಿವಾರದ ಸಂದೀಪ್ ಉಪ್ಪಿನಂಗಡಿ ಎಂಬಾತನಿಂದ ಪುಂಡಾಟ ಮೆರೆದಿದ್ದು, ವರದಿ ಮಾಡಲು ಹೋದ ಮಾಧ್ಯಮದವರನ್ನ ತಳ್ಳಾಡಿ ಅನುಚಿತ ವರ್ತನೆ ತೋರಿದ್ದಾರೆ. ಮಾಧ್ಯಮದವರು ಇಲ್ಲಿ ಬರುವುದು ಯಾಕೆ?, ನಮಗೆ ಮಾಧ್ಯಮದವರ ಅವಶ್ಯಕತೆ ಇಲ್ಲ ಎಂದು ದರ್ಪ ತೋರಿದ್ದಾರೆ.

ಭರತ್ ರಾಜ್, ಏಷ್ಯಾನೆಟ್ ಸುವರ್ಣ ನ್ಯೂಸ್, ಮಂಗಳೂರು

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಂಗಳೂರು(ಮಾ.16): ಬಿಜೆಪಿ ಸೇರ್ಪಡೆ ಮೊದಲ ದಿನವೇ ಪುತ್ತಿಲ ಪರಿವಾರದ ಕಾರ್ಯಕರ್ತರು ಬಿಜೆಪಿ ಕಚೇರಿಯಲ್ಲೇ ಗೂಂಡಾಗಿರಿ ಪ್ರದರ್ಶಿಸಿದ್ದಾರೆ. ಪುತ್ತಿಲ ಬಿಜೆಪಿ ಸೇರ್ಪಡೆಯ ಸುದ್ದಿಗೆ ತೆರಳಿದ್ದ ಮಾಧ್ಯಮಗಳಿಗೆ ಅವಾಜ್ ಹಾಕಿದ್ದಾರೆ.

ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿಯ ದ.ಕ ಬಿಜೆಪಿ ಜಿಲ್ಲಾ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಮಾಧ್ಯಮದವರ ಮೇಲೆ ಗೂಂಡಾಗಿರಿ ಪ್ರದರ್ಶಿಸಿದ್ದಾರೆ. ಪುತ್ತಿಲ ಪರಿವಾರದ ಸಂದೀಪ್ ಉಪ್ಪಿನಂಗಡಿ ಎಂಬಾತನಿಂದ ಪುಂಡಾಟ ಮೆರೆದಿದ್ದು, ವರದಿ ಮಾಡಲು ಹೋದ ಮಾಧ್ಯಮದವರನ್ನ ತಳ್ಳಾಡಿ ಅನುಚಿತ ವರ್ತನೆ ತೋರಿದ್ದಾರೆ. ಮಾಧ್ಯಮದವರು ಇಲ್ಲಿ ಬರುವುದು ಯಾಕೆ?, ನಮಗೆ ಮಾಧ್ಯಮದವರ ಅವಶ್ಯಕತೆ ಇಲ್ಲ ಎಂದು ದರ್ಪ ತೋರಿದ್ದಾರೆ.

ದ.ಕ ಜಿಲ್ಲೆಗೆ ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಪುತ್ತೂರಿನ ಹಿಂದೂ ಮುಖಂಡ ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಒಪ್ಪಿಗೆ!

ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆ ಸಂದರ್ಭ ನಡೆದ ಘಟನೆ ಇದಾಗಿದ್ದು, ಬಿಜೆಪಿ ಸೇರ್ಪಡೆ ಮೊದಲ ದಿನವೇ ಅಹಂಕಾರ ಪ್ರದರ್ಶಿಸಿದ್ದಾರೆ. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸಹಿತ ಬಿಜೆಪಿ ನಾಯಕರು ಕ್ಷಮೆಯಾಚಿಸಿದ್ದಾರೆ. ಆದರೆ ಪುತ್ತಿಲ ಪರಿವಾರದ ಕಾರ್ಯಕರ್ತರ ದರ್ಪ ಮುಂದುವರೆದ ಕಾರಣ ಮಾಧ್ಯಮದವರು ಕಾರ್ಯಕ್ರಮ ಬಹಿಷ್ಕರಿಸಿ ಹೊರ ನಡೆದಿದ್ದಾರೆ.