Asianet Suvarna News Asianet Suvarna News

ಸಂಘ ಪರಿವಾರಕ್ಕೆ ಪರ್ಯಾಯವಾಗಿ 'ಪುತ್ತಿಲ ಪರಿವಾರ' ಅಸ್ತಿತ್ವಕ್ಕೆ, ಆರೆಸ್ಸೆಸ್ ವಿರುದ್ಧವೇ ಪುತ್ತಿಲ ಅಚ್ಚರಿಯ ನಡೆ!

ಪುತ್ತೂರಿನ ಬಿಜೆಪಿ ಬಂಡಾಯ ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಬೆಂಬಲಿಗರಿಂದ ‘ನಮ್ಮ ನಡಿಗೆ ಶ್ರೀ ಮಹಾಲಿಂಗೇಶ್ವರನ ನಡೆದ ಎಂಬ ಬ್ರಹತ್‌ ಪಾದಯಾತ್ರೆ ಹಾಗೂ ‘ಸೇವಾ ಸಮರ್ಪಣಾ’ ಕಾರ್ಯಕ್ರಮ ಭಾನುವಾರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರ ಗದ್ದೆಯಲ್ಲಿ ಭಾನುವಾರ ನಡೆಯಿತು. ಈ ಸಂದರ್ಭದಲ್ಲಿ ‘ಪುತ್ತಿಲ ಪರಿವಾರ’ ಲಾಂಚನ ಬಿಡುಡೆಗೊಳಿಸಲಾಯಿತು.

Arun Puthila  headache for BJP and Sangh Parivar Hidutva vs BJP  in puttur   rav
Author
First Published May 22, 2023, 10:34 AM IST

ಪುತ್ತೂರು (ಮೇ.22) : ಪುತ್ತೂರಿನ ಬಿಜೆಪಿ ಬಂಡಾಯ ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಬೆಂಬಲಿಗರಿಂದ ‘ನಮ್ಮ ನಡಿಗೆ ಶ್ರೀ ಮಹಾಲಿಂಗೇಶ್ವರನ ನಡೆದ ಎಂಬ ಬ್ರಹತ್‌ ಪಾದಯಾತ್ರೆ ಹಾಗೂ ‘ಸೇವಾ ಸಮರ್ಪಣಾ’ ಕಾರ್ಯಕ್ರಮ ಭಾನುವಾರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರ ಗದ್ದೆಯಲ್ಲಿ ಭಾನುವಾರ ನಡೆಯಿತು. ಈ ಸಂದರ್ಭದಲ್ಲಿ ‘ಪುತ್ತಿಲ ಪರಿವಾರ’ ಲಾಂಚನ ಬಿಡುಡೆಗೊಳಿಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ,ದೈವ ಬಲ ಇರುವ ಕಾರಣಕ್ಕೆ ಪುತ್ತಿಲ ಅವರಿಗೆ ಈ ರೀತಿಯಾದ ಜನರ ಪ್ರೀತಿ ಬೆಂಬಲ ಸಿಕ್ಕಿದೆ. ಅಭ್ಯರ್ಥಿಗಳು ಹಣ ಹಂಚುವ ದಿನದಲ್ಲಿ ಮತದಾರ ಹಣ ನೀಡಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪುತ್ತಿಲ ಹಲವು ಇತಿಹಾಸ ಸೃಷ್ಟಿಸಿದ್ದಾರೆ ಎಂದರು.

ಪುತ್ತೂರು: ಮುಚ್ಚುತ್ತಿಲ್ಲ ಪುತ್ತಿಲ ವರ್ಸಸ್‌ ಬಿಜೆಪಿ ಕಂದಕ!

ಹಿಂದೂ ಸಂಘಟನೆ ಒಡೆದು ಹೋಗಬಾರದು ಎಂಬ ನಿಟ್ಟಿನಲ್ಲಿ ‘ಪುತ್ತಿಲ ಪರಿವಾರ’ ಸಂಘಟನೆ ಕಾರ್ಯೋನ್ಮುಖವಾಗಲಿದೆ. ಗುರು ಗೋಳ್ವಾಳ್ಕರ್‌ ಯೋಚನೆಯಂತೆ ಯಾವುದೇ ಸಂಘಟನೆಗಳಿಗೆ ಅಪಮಾನವಾಗದಂತೆ ಆರ್‌ಎಸ್‌ಎಸ್‌ಗೆ 100 ವರ್ಷಗಳಾಗುವ ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಗೋಳ್ವಾಳ್ಕರ್‌ ಆಶಯಕ್ಕೆ ಪೂರಕವಾಗಿ ಯಾರನ್ನೂ ದೂಷಿಸದೆ ಸಮಾಜ ಕಟ್ಟುವ ಕೆಲಸ ಮಾಡಲಿದೆ ಎಂದು ವಿವರಿಸಿದರು.

ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ, ಆದರೆ ಹಣ ಹಂಚಿಕೆ, ಅಪಪ್ರಚಾರ ಇನ್ನಿತರ ವಾಮಮಾರ್ಗದ ಕಾರಣದಿಂದಾಗಿ ನಮಗೆ ಸಣ್ಣ ಅಂತರದಿಂದ ಚುನಾವಣೆಯಲ್ಲಿ ಸೋಲಾಯಿತು. ಮೇಲಿನ ಸ್ಥಾನದಲ್ಲಿ ಕುಳಿತಿದ್ದ ನಾಯಕರು ಮಾಡಿದ ತಪ್ಪು ನಿರ್ಧಾರದಿಂದಾಗಿ ಹಿಂದೂ ಸಮಾಜಕ್ಕೆ ಶಕ್ತಿ ಕೊಡಬೇಕಾದ ನಾವು ಶಕ್ತಿ ಕಳೆದುಕೊಂಡೆವು ಎಂದರು.

ದೇವರೇ ಉತ್ತರಿಸುವನು:

ಅಧಿಕಾರಕ್ಕಾಗಿ ಎಂದೂ ರಾಜಕಾರಣ ಮಾಡಿಲ್ಲ. ಆದರೂ ನನ್ನ ಬಗ್ಗೆ ಹಲವಾರು ಅಪಮಾನ, ಅಪವಾದಗಳನ್ನು ಮಾಡಿದರು. ಅವರಿಗೆ ನನ್ನ ಕಣ್ಣೀರಿನ ಹನಿ ತಟ್ಟಲಿದೆ. ಶ್ರೀ ಮಹಾಲಿಂಗೇಶ್ವರ ಉತ್ತರ ನೀಡಲಿದ್ದಾನೆ. ದೈವ ದೇವರುಗಳು ಅವರಿಗೆ ಪಶ್ಚಾತ್ತಾಪದ ಜೊತೆಗೆ ಸನ್ನಡತೆಯನ್ನು ನೀಡಲಿ ಎಂದ ಅವರು, ಸ್ಪರ್ಧೆಯ ಮೂಲಕ ದೇಶಕ್ಕೆ ಬದಲಾವಣೆಯ ಚಿಂತನೆ ನೀಡಿದ್ದೇನೆ ಎಂದು ಹೇಳಿದರು.

ಪ್ರಸನ್ನ ಕುಮಾರ್‌ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾ. ಸುರೇಶ್‌ ಪುತ್ತೂರಾಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉದ್ಯಮಿ ರಾಜಶೇಖರ್‌ ಬನ್ನೂರು ಪುತ್ತಿಲ ಪರಿವಾರ ಸಂಘಟನೆಯ ನೂತನ ಲಾಂಚನ ಬಿಡುಗಡೆಗೊಳಿಸಿದರು. ವಸಂತ ಲಕ್ಷ್ಮೀ ಮತ್ತು ಡಾ. ಗಣೇಶ್‌ ಪ್ರಸಾದ್‌ ಮುದ್ರಜೆ ಉಪಸ್ಥಿತರಿದ್ದರು. ಉಮೇಶ್‌ ಕೋಡಿಬೈಲು ಸ್ವಾಗತಿಸಿದರು. ನವೀನ್‌ ಪಂಜಳ ನಿರೂಪಿಸಿದರು.

ಬ್ರಹತ್‌ ಕಾಲ್ನಡಿಗೆ ಜಾಥಾ:

ಸಭಾ ಕಾರ್ಯಕ್ರಮಕ್ಕೆ ಮೊದಲು ನಗರದ ದರ್ಬೆಯಿಂದ ಮುಖ್ಯರಸ್ತೆಯಲ್ಲಿ ದೇವಸ್ಥಾನದ ಗದ್ದೆಗೆ ಬೃಹತ್‌ ಪಾದಯಾತ್ರೆ ನಡೆಯಿತು. ಸುಮಾರು 5 ಸಾವಿರಕ್ಕೂ ಅಧಿಕ ಮಂದಿ ಪಾದಯಾತ್ರೆಯಲ್ಲಿ ಪಾಲ್ಗೊಂಡರು.

ಅರುಣ್‌ ಕುಮಾರ್‌ ಪುತ್ತಿಲ ಸೇರಿದಂತೆ ಹಲವು ಮಂದಿ ಜಾಥಾದಲ್ಲಿ ಬರಿಗಾಲಲ್ಲಿ ನಡೆದುಕೊಂಡು ಬಂದರು. ಜಾಥಾದ ಉದ್ದಕ್ಕೂ ಓಂ ನಮಃ ಶಿವಾಯ, ಮಂತ್ರ ಪಠಣ ಉಚ್ಛಾರಣೆ ಕೇಳಿಬರುತ್ತಿತ್ತು. ನಗರದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತು ಏರ್ಪಡಿಸಲಾಗಿತ್ತು.

ಪರ್ಯಾಯ ಹಿಂದೂ ಸಂಘಟನೆ ಸ್ಥಾಪಿಸಿ ಸಂಘ ಪರಿವಾರಕ್ಕೆ ಠಕ್ಕರ್ ಕೊಟ್ರಾ ಪುತ್ತಿಲ?

ಸಂಘ ಪರಿವಾರಕ್ಕೆ ಪರ್ಯಾಯವಾಗಿ 'ಪುತ್ತಿಲ ಪರಿವಾರ' ಅಸ್ತಿತ್ವಕ್ಕೆ. ಆರ್.ಎಸ್.ಎಸ್ ವಿರುದ್ದವೇ ಅರುಣ್ ಪುತ್ತಿಲ ಅಚ್ಚರಿಯ ನಡೆ. ಪರಿವಾರ ಸಂಘಟನೆಗಳಿಗೆ ಪರ್ಯಾಯವಾಗಿ ಪುತ್ತಿಲ ಪರಿವಾರ್ ಸ್ಥಾಪಿಸಿದ ಪುತ್ತಿಲ. ಪುತ್ತೂರಿನಲ್ಲಿ ಅಧಿಕೃತವಾಗಿ 'ಪುತ್ತಿಲ ಪರಿವಾರ್' ಸಂಘಟನೆ ಘೋಷಣೆ

ಪುತ್ತೂರಿನಲ್ಲಿ ನಡೆದ ಸೇವಾ ಸಮರ್ಪಣಾ ಸಮಾವೇಶದಲ್ಲಿ ಪುತ್ತಿಲ ಪರಿವಾರ ಘೋಷಣೆಯಾಗಿರುವ ಹಿನ್ನೆಲೆ ಮತ್ತಷ್ಟು ಬಿಸಿಯೇರಿದ ಹಿಂದುತ್ವ ವರ್ಸಸ್ ಬಿಜೆಪಿ ಫೈಟ್. ಆರ್ ಎಸ್ ಎಸ್ ಸಿದ್ಧಾಂತವನ್ನ ಮುಂದಿಟ್ಟುಕೊಂಡು ಪುತ್ತಿಲ ಪರಿವಾರ ಆರಂಭಿಸಿದ್ರಾ ಪುತ್ತಿಲ?

ಸಾವಿರಾರು ಕಾರ್ಯಕರ್ತರ ಸಮ್ಮುಖ 'ಪುತ್ತಿಲ ಪರಿವಾರ' ಲೋಗೋ ರಿಲೀಸ್ ಮಾಡಿರುವ ಪುತ್ತಿಲ. ಲೋಕಸಭಾ ಚುನಾವಣೆ ಟಾರ್ಗೆಟ್ ಇಟ್ಟುಕೊಂಡು ಪುತ್ತಿಲ ಪರಿವಾರ ಅಸ್ತಿತ್ವಕ್ಕೆ. ವಿಭಜನೆಯ ಭೀತಿಯಲ್ಲಿರುವ ಕರಾವಳಿಯ ಪ್ರಬಲ ಸಂಘ ಪರಿವಾರ. ಸಂಘಟನೆಯ ಹಲವು ಕಾರ್ಯಕರ್ತರು 'ಪುತ್ತಿಲ ಪರಿವಾರ' ಪರ ಬ್ಯಾಟಿಂಗ್ ಮಾಡುತ್ತಿರುವುದು ಆರ್.ಎಸ್.ಎಸ್, ಬಿಜೆಪಿಗೆ ಮತ್ತಷ್ಟು ತಲೆ ನೋವಾಗಿ ಪರಿಣಮಿಸಿದೆ.

ನಮ್ಮ ಕಾರ್ಯಕರ್ತರು ತಾಲಿಬಾನಿಗಳಲ್ಲ, ದೇಶದ್ರೋಹಿಗಳಲ್ಲ: ಪೊಲೀಸರ ವರ್ತನೆಗೆ ಯತ್ನಾಳ್ ಗರಂ 

ಬಿಜೆಪಿಗೆ ಪರ್ಯಾಯ ಸ್ಪರ್ಧಿಸಿ  ನಡುಕ ಹುಟ್ಟಿಸಿದ್ದ ಅರುಣ್ ಪುತ್ತಿಲ ಇದೀಗ ಭಾರೀ ಕಾರ್ಯಕರ್ತರ ಬೆಂಬಲದ ಮಧ್ಯೆ ಹೊಸ ಸಂಘಟನೆ ಘೋಷಣೆ ಮಾಡಿರುವುದು ಅದೂ ಹಿಂದುತ್ವದ ಹೆಸರಲ್ಲೇ ಸಂಘಟನೆ ಕಟ್ಟಿ ಬಿಜೆಪಿಗೆ ಮತ್ತೆ ಪುತ್ತಿಲ ಕೌಂಟರ್ ನೀಡಿದ್ದಾರೆ. ಹಿಂದುತ್ವದ ಶಕ್ತಿಕೇಂದ್ರದಲ್ಲೇ ಹಿಂದುತ್ವಕ್ಕೆ ಪರ್ಯಾಯ ಸಂಘಟನೆ ಉದಯವಾಗಿರುವುದು ಬಿಜೆಪಿ, ಸಂಘಪರಿವಾರಕ್ಕೆ ನುಂಗಲಾರದ ತುತ್ತಾಗಿದೆ.

Follow Us:
Download App:
  • android
  • ios