ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ.ಸ್ಫೋಟ ಹಾಗೂ ಬಜೆಟ್ ಅಧಿವೇಶನ ಮಧ್ಯೆ ಹೈಕಮಾಂಡ್ ಕರೆ ಮೇರೆಗೆ ಸಚಿವ ಅರವಿಂದ ಲಿಂಬಾವಳಿಗೆ ದಿಢೀರ್ ದೆಹಲಿಗೆ ಹಾರಿದ್ದಾರೆ.

ಬೆಂಗಳೂರು, (ಮಾ.05): ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ದೆಹಲಿಯಿಂದ ತುರ್ತು ಬುಲಾವ್ ಬಂದ ಹಿನ್ನೆಲೆಯಲ್ಲಿ ತಮ್ಮ ಪ್ರವಾಸ ಮೊಟಕುಗೊಳಿಸಿ ದೆಹಲಿಗೆ ತೆರಳಿದ್ದಾರೆ.

Add Asianetnews Kannada as a Preferred SourcegooglePreferred

ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ಕರೆಯ ಮೇರೆಗೆ ಅರವಿಂದ ಲಿಂಬಾವಳಿ ಅವರು ಇಂದು (ಶುಕ್ರವಾರ) ಕಲಬುರಗಿ ರದ್ದು ಮಾಡಿ ದಿಲ್ಲಿಗೆ ಹಾರಿದ್ದಾರೆ.

ರಾಸಲೀಲೆ CD ಸ್ಫೋಟ: ಕೋರ್ಟ್ ಮೆಟ್ಟಿಲೇರಿದ 6 ಸಚಿವರು, ಅಚ್ಚರಿ ಮೂಡಿಸಿದ ನಡೆ

ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಜವಾಬ್ದಾರಿಯನ್ನು ಅರವಿಂದ ಲಿಂಬಾವಳಿ ಅವರಿಗೆ ವಹಿಸಿದೆ. ಕರ್ನಾಟಕದ ಮೊದಲ ಹಂತದ ಉಪಚುನಾವಣೆಗಳಲ್ಲಿ, ತೆಲಂಗಾಣ ಲೋಕಸಭಾ ಚುನಾವಣೆಗಳಲ್ಲಿ ಅರವಿಂದ ಲಿಂಬಾವಳಿ ಯಶ ಸಾಧಿಸಿದ್ದರು.

ತೃಣಮೂಲ ಕಾಂಗ್ರೆಸ್ ನ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಪಶ್ಚಿಮ ಬಂಗಾಳದಲ್ಲಿ ಭಾರತೀಯ ಜನತಾ ಪಕ್ಷದ ಪ್ರಾಬಲ್ಯ ಸಾಬೀತುಪಡಿಸುವ ಮತ್ತು ಅದನ್ನು ಬೆಳೆಸುವ ಮಹತ್ವದ ಜವಾಬ್ದಾರಿಯನ್ನು ಅರವಿಂದ ಲಿಂಬಾವಳಿ ಅವರಿಗೆ ವಹಿಸಲಾಗಿದೆ. 

ಚುನಾವಣಾ ಕಾರ್ಯತಂತ್ರವನ್ನು ಹೆಣೆಯಲೆಂದೇ ಹೈಕಮಾಂಡ್, ಅವರನ್ನು ದಿಲ್ಲಿಗೆ ಕರೆಸಿಕೊಂಡಿದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.