Asianet Suvarna News Asianet Suvarna News

ಹೊಸಬರಿಗೆ ಟಿಕೆಟ್‌ ಐಡಿಯಾ ಕೊಟ್ಟವರನ್ನು ನೇಣಿಗೆ ಬೇಕಾದರೂ ಹಾಕಿ: ರಮೇಶ ಜಜಿಗಜಿಣಗಿ ತೀವ್ರ ಆಕ್ರೋಶ

ಹೊಸಬರಿಗೆ ಟಿಕೆಟ್‌ ಕೊಡಿ ಎಂದು ಬಿಜೆಪಿ ಹೈಕಮಾಂಡ್‌ಗೆ ಯಾರು ಐಡಿಯಾ ಕೊಟ್ಟಿದ್ದಾರೋ ಗೊತ್ತಿಲ್ಲ. ಅವರನ್ನು ನೇಣಿಗೆ ಬೇಕಾದರೂ ಹಾಕಿ, ಕಾಲನ್ನಾದರೂ ಕಡಿಯಿರಿ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದರು.

Assembly ticket for freshers issue Hang those who gave an idea ramesh jigajinagi outraged at vijayapur rav
Author
First Published Jun 13, 2023, 9:04 PM IST

ವಿಜಯಪುರ (ಜೂ.13) ಹೊಸಬರಿಗೆ ಟಿಕೆಟ್‌ ಕೊಡಿ ಎಂದು ಬಿಜೆಪಿ ಹೈಕಮಾಂಡ್‌ಗೆ ಯಾರು ಐಡಿಯಾ ಕೊಟ್ಟಿದ್ದಾರೋ ಗೊತ್ತಿಲ್ಲ. ಅವರನ್ನು ನೇಣಿಗೆ ಬೇಕಾದರೂ ಹಾಕಿ, ಕಾಲನ್ನಾದರೂ ಕಡಿಯಿರಿ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ(Karnataka assembly election) ಸಂದರ್ಭದಲ್ಲಿ 70ಕ್ಕೂ ಹೆಚ್ಚು ಜನ ಹೊಸಬರಿಗೆ ಟಿಕೆಟ್‌ ನೀಡಲಾಗಿತ್ತು. ಅದರಲ್ಲಿ ಗೆದ್ದವರು ಬೆರಳಣಿಕೆಯಷ್ಟುಜನ ಮಾತ್ರ. ಹಿರಿಯರಿಗೆ ಟಿಕೆಟ್‌ ಕೊಟ್ಟಿದ್ದರೆ ಎಲ್ಲರೂ ಗೆಲ್ಲುತ್ತಿದ್ದರು. ಆಗ 130ಕ್ಕೂ ಹೆಚ್ಚು ಸೀಟ್‌ಗಳಲ್ಲಿ ಬಿಜೆಪಿ ಗೆದ್ದು ಬಹುಮತ ಸಾಧಿಸುತ್ತಿತ್ತು. ಹೊಸಬರಿಗೆ ಬಿಜೆಪಿ ಟಿಕೆಟ್‌ ಕೊಡುವ ಔಚಿತ್ಯ ಇರಲಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ದಲಿತ ಸಿಎಂ ಬೇಡಿಕೆ ಸಾಯುವವರೆಗೂ ಒತ್ತಾಯ: ಸಂಸದ ರಮೇಶ ಜಿಗಜಿಣಗಿ

ಅದರಲ್ಲೂ ಉತ್ತರ ಕರ್ನಾಟಕದ ಪ್ರಭಾವಿ ನಾಯಕರಾದ ಜಗದೀಶ ಶೆಟ್ಟರ್‌(Jagadish shettar) ಮತ್ತು ಲಕ್ಷ್ಮಣ ಸವದಿ(Laxman savadi) ಅವರು ಪಕ್ಷ ಬಿಟ್ಟು ಹೋಗಿರುವುದು, ಕಾಂಗ್ರೆಸ್‌ನ ಗ್ಯಾರಂಟಿ ಅಬ್ಬರದ ಪರಿಣಾಮ ಬಿಜೆಪಿಗೆ ಹಿನ್ನಡೆಯಾಗಿದೆ ಎಂದು ಹೇಳಿದರು.

ಆದರೆ, ಕಾಂಗ್ರೆಸ್‌ನ ಗ್ಯಾರಂಟಿ ಲೋಕಸಭೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಕಾಂಗ್ರೆಸ್‌ ಪಕ್ಷದಲ್ಲಿ ನಾಯಕತ್ವವೇ ಇಲ್ಲ. ಆ ಹುಡುಗ, ಆ ಹುಡುಗಿ ಅವರೇನು ನಾಯಕರೇ ಎಂದು ಪರೋಕ್ಷವಾಗಿ ರಾಹುಲ್‌, ಪ್ರಿಯಾಂಕಾ ಗಾಂಧಿ ವಿರುದ್ಧ ಜಗಜಿಣಗಿ ವ್ಯಂಗ್ಯವಾಡಿದರು.

ಕಾಂಗ್ರೆಸ್‌ ಪಕ್ಷ ದೇಶವನ್ನೇ ಮಾರುವ ಹಂತಕ್ಕೆ ತಲುಪಿಸಿತ್ತು, ಪುಣ್ಯಾತ್ಮ ಮೋದಿ ಅಧಿಕಾರಕ್ಕೆ ಬಂದಿರುವುದರಿಂದ ಇದು ತಪ್ಪಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಯಾವುದೇ ಮನ್ನಣೆ ದೊರಕುವುದಿಲ್ಲ ಎಂದರು.

ವಿಧಾನಸಭೆ ಪ್ರತಿಪಕ್ಷ ನಾಯಕನನ್ನು ಬಿಜೆಪಿ ಶೀಘ್ರದಲ್ಲಿಯೇ ಆಯ್ಕೆ ಮಾಡಲಿದೆ. ಕಾಂಗ್ರೆಸ್‌ಗೆ ಮೂಗುದಾರ ಹಾಕಲು ಪ್ರತಿಪಕ್ಷದ ನಾಯಕ ಯಾರಾಗಬೇಕು ಎಂಬುದನ್ನು ಹೈಕಮಾಂಡ್‌ ತೀರ್ಮಾನಿಸುತ್ತದೆ. ನಾನು ಸಂಸತ್‌ ಸದಸ್ಯ ಈ ಬಗ್ಗೆ ಏನ್ನನ್ನೂ ಹೇಳಲ್ಲ. ನಾನು ಶಾಸಕನಾಗಿದ್ದರೆ ಇಂಥವರನ್ನು ಮಾಡಿ ಎಂದು ಹೇಳಬಹುದಿತ್ತು. ಈಗ ಯಾರನ್ನು ಮಾಡಿದರೂ ನನಗೆ ಸಂತೋಷವೇ ಎಂದರು.

ನಾವು ಪಕ್ಷ ಸೇರದಿದ್ದರೆ ಬಿಜೆಪಿ ಗೆಲ್ಲುತ್ತಿರಲಿಲ್ಲ: ಸಂಸದ ರಮೇಶ ಜಿಗಜಿಣಗಿ

ಮುಂದೆ ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ದಲಿತ ಮುಖ್ಯಮಂತ್ರಿ ಆಗುವುದು ನಿಶ್ಚಿತ. ದಲಿತ ಸಮುದಾಯ ಜಾಗೃತಗೊಂಡಿದೆ. ಭವಿಷ್ಯದಲ್ಲಿ ದಲಿತರೊಬ್ಬರು ರಾಜ್ಯದ ಸಿಎಂ ಆಗುವುದು ಸೂರ್ಯ, ಚಂದ್ರ ಇರುವಷ್ಟೇ ಸತ್ಯ ಎಂದರು.

Follow Us:
Download App:
  • android
  • ios