Asianet Suvarna News Asianet Suvarna News

ನಿಮ್ಮ ಮಗ ಚಿಕ್ಕವ. ಆಮೇಲೆ ಟಿಕೆಟ್‌ ಕೊಡಿಸಿ, ನಾವು ಕ್ಯೂನಲ್ಲಿದ್ದೇವೆ: ಈಶ್ವರಪ್ಪಗೆ ಆಯನೂರು ಟಾಂಗ್‌

ನಿಮ್ಮ ಮಗ ಇನ್ನೂ ಚಿಕ್ಕವನಿದ್ದಾನೆ. ನಂತರ ಕೊಡಿ. ಸದ್ಯಕ್ಕೆ ಕ್ಯೂನಲ್ಲಿ ನಾವು ಇದ್ದೇವೆ ಎಂದು ಆಯನೂರು ಮಂಜುನಾಥ್‌ ನೇರವಾಗಿ ಈಶ್ವರಪ್ಪ ಅವರನ್ನು ಗುರಿಯಾಗಿ ಹೇಳಿಕೆ ನೀಡಿದ್ದಾರೆ. 

Ayanur Manjunath Slams On KS Eshwarappa At Shivamogga gvd
Author
First Published Mar 22, 2023, 11:29 AM IST

ಶಿವಮೊಗ್ಗ (ಮಾ.22): ನಿಮ್ಮ ಮಗ ಇನ್ನೂ ಚಿಕ್ಕವನಿದ್ದಾನೆ. ನಂತರ ಕೊಡಿ. ಸದ್ಯಕ್ಕೆ ಕ್ಯೂನಲ್ಲಿ ನಾವು ಇದ್ದೇವೆ ಎಂದು ಆಯನೂರು ಮಂಜುನಾಥ್‌ ನೇರವಾಗಿ ಈಶ್ವರಪ್ಪ ಅವರನ್ನು ಗುರಿಯಾಗಿ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ನನಗೆ ಆಗದಿದ್ದರೆ ನನ್ನ ಮಗನಿಗೆ ಟಿಕೆಟ್‌ ಕೊಡಿ ಎಂದು ಈಶ್ವರಪ್ಪ ಕೇಳಿದ್ದಾರೆ. ಆದರೆ ಪಕ್ಷದಲ್ಲಿ ನಾವು ಸಾಕಷ್ಟುಮಂದಿ ಪಕ್ಷಕ್ಕೆ ಸೇವೆ ಸಲ್ಲಿಸಿರುವವರು ಇದ್ದೇವೆ. ಮಗನಿಗೆ ಆಮೇಲೆ ಕೊಡಲಿ, ಸಧ್ಯ ನಮಗೆ ನೀಡಲಿ ಎಂದು ಹೇಳಿದರು.

ಶಿವಮೊಗ್ಗ ನಗರದ ವಿವಿಧೆಡೆ ಹಾಕಲಾದ ಫ್ಲೆಕ್ಸ್‌ನಲ್ಲಿ ‘ಹರಕು ಬಾಯಿಗೆ ಬೀಗ ಹಾಕಲಿ’ ಎಂಬ ವಾಕ್ಯದ ಕುರಿತ ಮಾಧ್ಯಮಗಳ ಪ್ರಶ್ನೆಗೆ ‘ಹರಕು ಬಾಯಿಗಳಿಗೆ ಹೊಲಿಗೆ ಬೀಳಲಿ’ ಎಂದು ಬಹುವಚನ ಬಳಸಲಾಗಿದೆ. ಹೀಗಾಗಿ ಆ ಮಾತನ್ನು ಈಶ್ವರಪ್ಪ ಒಬ್ಬರಿಗೇ ಅನ್ವಯಿಸುವುದು ಸರಿಯಲ್ಲ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರಾರ್ಥನೆ ಮಾಡಲು ಮುಂದಾಗುವವರಿಗೂ ಅದು ಅನ್ವಯಿಸುತ್ತದೆ ಎಂದರು. ಈಶ್ವರಪ್ಪ ಮತ್ತು ಬಿಜೆಪಿಯ ನಡುವೆ ನಾನು ಉರಿಗೌಡನೂ ಅಲ್ಲ. ನಂಜೇಗೌಡನೂ ಅಲ್ಲ. ಬದಲಿಗೆ ನಾನು ಆಯನೂರು ಮಂಜುನಾಥ್‌. ಯಾರ ಬಾಯಲ್ಲಿ ನಂಜು ಬರುತ್ತದೆಯೋ ಅವರನ್ನು ನಂಜೇಗೌಡ ಅನ್ನಿ. ಯಾರು ನನ್ನ ಮಾತು ಕೇಳಿ ಉರಿಬೀಳುತ್ತಾರೊ ಅವರಿಗೆ ಉರಿಗೌಡ ಅನ್ನಿ ಎಂದು ಟಾಂಗ್‌ ನೀಡಿದರು.

ಕೋಲಾರದಲ್ಲಿ ಸ್ಪರ್ಧಿಸದಂತೆ ಹೈಕಮಾಂಡ್‌ ಹೇಳಿಲ್ಲ: ಸಿದ್ದರಾಮಯ್ಯ

ಈಶ್ವರಪ್ಪ ಜವಾಬ್ದಾರಿಯಿಂದ ಮಾತನಾಡಬೇಕೆಂಬ ನಿರೀಕ್ಷೆ: ಯಾವುದೋ ಧರ್ಮದ ದೇವರು ಕಿವುಡನೇ, ಕುರುಡನೇ ಎಂದು ಶಾಸಕ ಕೆ.ಎಸ್‌. ಈಶ್ವರಪ್ಪ ಮಾತಾಡುವುದು ಬೇಡ. ಅವರೊಬ್ಬ ಪ್ರಬುದ್ಧ ರಾಜಕಾರಣಿ. ಜವಾಬ್ದಾರಿಯಿಂದ ಮಾತಾಡಬೇಕು ಎಂಬ ನಿರೀಕ್ಷೆ ನನಗೂ ಇದೆ. ಬಿಜೆಪಿಗೆ ಧಕ್ಕೆ ಬರುವ ಯಾವುದೇ ಮಾತುಗಳನ್ನು ಯಾವುದೇ ನಾಯಕರು ಹೇಳಿದರೂ ಅದನ್ನು ಸ್ವೀಕಾರ ಮಾಡಬೇಕೆಂಬ ಬಲವಂತ ನಮಗೆ ಯಾರಿಗೂ ಇಲ್ಲ. ಸಂಘಟನೆಯ ಹಿತದೃಷ್ಟಿಯಿಂದ ಈಶ್ವರಪ್ಪ ಹೀಗೆ ಮಾತಾಡುವುದು ಸರಿಯಲ್ಲ. ಜವಾಬ್ದಾರಿಯಿಂದ ಮಾತಾಡಿ ಎಂದು ಹೇಳಿದ್ದೇನೆ. ಅದರಲ್ಲಿ ತಪ್ಪೇನಿದೆ? ಈಶ್ವರಪ್ಪ ಹಾಗೆ ಮಾತಾಡಿದ್ದರೆ ತಿದ್ದಿಕೊಳ್ಳುವುದು ಒಳ್ಳೆಯದು. ಸಣ್ಣ ಘಟನೆ ನಡೆದರೂ ಶಿವಮೊಗ್ಗದಲ್ಲಿ ಏನಾಗುತ್ತದೆ ಎಂಬುದು ಊಹಿಸಿಕೊಳ್ಳಲಿ ಎಂದು ಕಿವಿಮಾತು ಹೇಳಿದರು.

ಸಿದ್ದು ಕೋಲಾರದಿಂದಲೇ ಸ್ಪರ್ಧಿಸಬೇಕೆಂದು ಬಾರುಕೋಲಲ್ಲಿ ಹೊಡೆದುಕೊಂಡು ಧರಣಿ!

ಪಕ್ಷ ಬಿಡಲ್ಲ; ಸರಿ ಮಾಡಲು ಬಡಿದಾಡುತ್ತೇನೆ: ಬಿಜೆಪಿ ತ್ಯಜಿಸಲಿದ್ದೀರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಿಷ್ಠುರವಾದ ಮಾತನಾಡಿದ ಕೂಡಲೇ ಆಯನೂರು ಅಲ್ಲಿಗೆ ಹೋಗುತ್ತಾರೆ. ಇಲ್ಲಿಗೆ ಹೋಗುತ್ತಾರೆ ಅನ್ನುತ್ತಾರೆ. ಪಕ್ಷವನ್ನು ಸರಿ ಮಾಡಬೇಕು ಎಂದು ನೈಜ ಬಡಿದಾಟ ಆರಂಭಿಸಿದ್ದೇನೆ. ಅದಕ್ಕೆ ಏನೇನೊ ಅರ್ಥ ಕೊಟ್ಟರೆ ಅದಕ್ಕೆ ನಾನು ಹೊಣೆಗಾರನಲ್ಲ ಎಂದರು. ನನಗೆ ಮದುವೆ ಆಗಲು ಮನೆಯಲ್ಲೇ ಹೆಣ್ಣು ಇದೆ ಎನ್ನುವಾಗ ಪಕ್ಕದ ಮನೆಯಲ್ಲಿ ನಾನು ಯಾಕೆ ನೋಡಲಿ? ಅಥವಾ ರಸ್ತೆಯಲ್ಲಿ ಹೋಗುವವರನ್ನು ನಾನು ಯಾಕೆ ನೋಡಲಿ? ಶಿವಮೊಗ್ಗ ನಗರ ಕ್ಷೇತ್ರದಿಂದ ನನಗೆ ಬಿಜೆಪಿ ಟಿಕೆಟ್‌ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದರು.

Follow Us:
Download App:
  • android
  • ios