ಕೇಸ್ ಹಿಂಪಡೆದ ಬೆನ್ನಲ್ಲೇ ಜಾರಕಿಹೊಳಿ ಸುದ್ದಿಗೋಷ್ಠಿ: ಮಹತ್ವ ಮಾಹಿತಿ ಬಹಿರಂಗ
ದಿನೇಶ್ ಕಲ್ಲಹಳ್ಳಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೂರು ಹಿಂಪಡೆದ ಬೆನ್ನಲ್ಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಕೆ.ಕೆ.ಗೆಸ್ಟ್ಹೌಸ್ನಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಅದರ ಮುಖ್ಯಾಂಶಗಳು ಈ ಕೆಳಗಿನಂತಿವೆ.
ಬೆಂಗಳೂರು, (ಮಾ.07): ರಮೇಶ್ ಜಾರಕಿಹೊಳಿ ವಿರುದ್ಧದ ರಾಸಲೀಲೆ ಸಿ.ಡಿ. ಪ್ರಕರಣವನ್ನು ಸಂಬಂಧಿಸಿದಂತೆ ದೂರುದಾರ ದಿನೇಶ್ ಕಲ್ಲಹಳ್ಳಿ ವಾಪಸ್ ಪಡೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸಹೋದರ ಬಾಲಚಂದ್ರ ಜಾರಕೊಳಿ ಅವರು ದಿಢೀರ್ ಸುದ್ದಿಗೋಷ್ಠಿ ನಡೆಸಿದ್ದು, ಮಹತ್ವ ಅಂಶಗಳನ್ನು ತಿಳಿಸಿದ್ದಾರೆ.
"
ಬೆಂಗಳೂರಿನಲ್ಲಿ ಇಂದು (ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಬಾಲಚಂದ್ರ ಜಾರಕೊಳಿ ಅವರು, ರಮೇಶ್ ಜಾರಕಿಹೊಳಿ ವಿರುದ್ಧದ ವಿಡಿಯೋವನ್ನು ಪೊಲೀಸರಿಗೆ ತಿಳಿಸುವ ಮೊದಲೇ ರಷ್ಯಾದಲ್ಲಿ ಯುಟ್ಯೂಬ್ಗೆ ಅಪ್ಲೋಡ್ ಆಗಿತ್ತು. 17 ಸರ್ವರ್ ಬುಕ್ ಮಾಡಿದ್ದರು. ಅದಕ್ಕಾಗಿ 10 ರಿಂದ 15 ಕೋಟಿ ಖರ್ಚು ಮಾಡಿದ್ದರು. ಗಂಭೀರ ಷಡ್ಯಂತ್ರವನ್ನು ನನ್ನ ಅಣ್ಣನ ವಿರುದ್ಧ ನಡೆಸಲಾಗಿತ್ತು. ದಯವಿಟ್ಟು ಮಾಧ್ಯಮಗಳಲ್ಲಿ ಆ ಮಹಿಳೆಗೆ ಸಂತ್ರಸ್ತ ಮಹಿಳೆ ಎಂಬ ಪದ ಬಳಸಬೇಡಿ. 15 ಕೋಟಿ ಖರ್ಚು ಮಾಡಿ ರಮೇಶ್ ಜಾರಕಿಹೊಳಿ ಮಂತ್ರಿಗಿರಿ ತಪ್ಪಿಸಲು ಈ ಕೆಲಸ ಮಾಡಿದ್ದಾರೆ ಎಂದರು.
ರಾಸಲೀಲೆ ಸಿ.ಡಿ. ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ರಮೇಶ್ ಜಾರಕಿಹೊಳಿಗೆ ಬಿಗ್ ರಿಲೀಫ್
ಹನಿಟ್ರ್ಯಾಪ್ ಆರೋಪ
ಸಿಡಿ ಕಟ್ ಮಾಡಿ ಎಡಿಟ್ ಮಾಡಿ ಹಾಕಿದ್ದಾರೆ. ಷಡ್ಯಂತ್ರ ಹೊರಗೆ ಬರಲು ಸಮಗ್ರ ತನಿಖೆ ಆಗಬೇಕು. ರಮೇಶ್ ಜಾರಕಿಹೊಳಿ ಮನೆಯಿಂದ ಹೊರಗೆ ಬಂದು ದೂರು ಕೊಡಬೇಕು. ಮಹಿಳೆಗೆ ನೀನು ಹೆದರಬೇಡ, 50 ಲಕ್ಷ ಹಣ, ದುಬೈನಲ್ಲಿ ಕೆಲಸ ಕೊಡಿಸ್ತೀವಿ' ಅಂತ ಆಕೆಗೆ ಭರವಸೆ ಕೊಟ್ಟು ಈ ಕೆಲಸ ಮಾಡಿಸಿದ್ದಾರೆ ಆಂತ ನಮ್ಮ ಸೋರ್ಸ್ ಹೇಳುತ್ತದೆ ಎಂದು ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿದರು.
ನಾಳೆ ಒಂದು ದಿನ ಬಿಟ್ಟು ನಮ್ಮ ಸೋರ್ಸ್ ಮೂಲಕ ನಾವು ಕೆಲಸ ಮಾಡ್ತೀವಿ. ಮರ್ಯಾದೆ ಗೌರವ ಹೋದರೆ ಕಷ್ಟವಾಗುತ್ತೆ. ನಾವೂ ಈ ಕೇಸ್ ಫಾಲೊ ಮಾಡ್ತೀವಿ. ನಮ್ಮ ಸೋರ್ಸ್ ಮೂಲಕ ಕೆಲಸ ಮಾಡುತ್ತೇವೆ. ಇದು ಹನಿಟ್ರ್ಯಾಪ್ ಆಗಿದೆ. ಪ್ರಶ್ನೆಗಳನ್ನು ಯಾರೋ ಬರೆದುಕೊಟ್ಟಿದ್ದಾರೆ. ಅದನ್ನು ಆಕೆ ಕೇಳಿದ್ದಾಳೆ. ಐದು ರಾಜ್ಯಗಳಲ್ಲಿ ಚುನಾವಣೆ ನಡೀತಿದೆ. ನಮ್ಮ ಪಕ್ಷಕ್ಕೆ ಕೆಟ್ಟ ಹೆಸರು ತರಲು ಈ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.
ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಕೇಸ್ ವಾಪಸ್ಗೆ 5 ಪ್ರಮುಖ ಕಾರಣಗಳು
ಮುಂದಿನ ನಡೆ ಬಗ್ಗೆ ಮಾಹಿತಿ
ಇವತ್ತು (ಭಾನುವಾರ) ನಾನೇ ರಮೇಶ್ ಜಾರಕಿಹೊಳಿಯನ್ನು ಭೇಟಿ ಮಾಡುತ್ತೇನೆ. ಧೈರ್ಯವಾಗಿ ಹೊರಗೆ ಬರಲು ಮನವೊಲಿಸ್ತೀನಿ. ದಿನೇಶ್ ಕಲ್ಲಹಳ್ಳಿ ವಿರುದ್ಧ ಕಾನೂನು ಹೋರಾಟ ನಡೆಸುವ ಬಗ್ಗೆ ನಂತರ ಯೋಚಿಸುತ್ತೇವೆ. ಲಾಯರ್ ಜೊತೆಗೆ ಚರ್ಚೆ ಮಾಡಿ ಮುಂದಿನ ನಿರ್ಧಾರ ತಗೊಳುತ್ತೇವೆ ಎಂದು ಸ್ಪಷ್ಟಪಡಿಸಿದರು.
'ಹನಿಟ್ರ್ಯಾಪ್ ಇರಬಹುದು ಅಥವಾ ಫೇಕ್'
ವಿಡಿಯೊ ನಾನು ಈವರೆಗೆ ನೋಡಿಲ್ಲ. ಇದು ಹನಿಟ್ರ್ಯಾಪ್ ಇರಬಹುದು ಅಥವಾ ಫೇಕ್ ಇರಬಹುದು. ನನ್ನ ಪ್ರಕಾರ ಇದು ಫೇಕ್ ವಿಡಿಯೊ. ಹನಿಟ್ರ್ಯಾಪ್ಗೆ ಪ್ರಯತ್ನ ಪಟ್ಟಿದ್ದಾರೆ. ದಿನೇಶ್ ಕಲ್ಲಹಳ್ಳಿಯೂ ಇದರಲ್ಲಿ ಮಿಸ್ಗೈಡ್ ಆಗಿರಬಹುದು. ಅವರಿಗೆ ಸಂಪೂರ್ಣ ಮಾಹಿತಿ ಕೊಡದೇ ದಾರಿತಪ್ಪಿಸಿದ್ದಾರೆ ಆಂತ ನನಗೆ ಅನ್ನಿಸುತ್ತೆ. ದಿನೇಶ್ ಕಲ್ಲಹಳ್ಳಿಯನ್ನು ತಮ್ಮ ಉದ್ದೇಶಕ್ಕೆ ಬಳಸಿಕೊಂಡಿರಬಹುದು ಎಂದು ತಿಳಿಸಿದರು.