ಮುಂಬರುವ ಚುನಾವಣೆಗೆ ಬಿಜೆಪಿ ರಾಜ್ಯದಲ್ಲಿ ಈಗಿನಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿದೆ. ಈ ಹಿನ್ನಲೆಯಲ್ಲಿ ಸ್ಥಳೀಯ ಚುನಾವಣೆಗಳನ್ನೂ ಸಹ ಗಂಭೀರವಾಗಿ ಪರಿಗಣಿಸಿದೆ. ಆದ್ರೆ, ಈ ವೇಳೆ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಯಲ್ಲಿ ಮುಖಂಡನನ್ನು  ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.

ಬೆಳಗಾವಿ, (ನ.06): ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲೂ ಸಹ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಭರ್ಜರಿ ಪೈಪೋಟಿ ನಡೆಸಿವೆ. ಪಕ್ಷವನ್ನ ತಳ ಮಟ್ಟದಿಂದ ಬೆಳಸಬೇಕಿದ್ದರೆ ಸ್ಥಳೀಯ ಸಂಸ್ಥೆ ಚುನಾವಣೆಗಳು ಪ್ರಮುಖ ಪಾತ್ರವಹಿಸುತ್ತವೆ. ಇದರಿಂದ ಈ ಮೂರು ಪಕ್ಷಗಳು ಹಳ್ಳಿ ಪಾಲಿಟಿಕ್ಸ್ ಹೆಚ್ಚಿನ ಪ್ರಮುಖ್ಯತೆ ನೀಡುತ್ತಿವೆ.

Add Asianetnews Kannada as a Preferred SourcegooglePreferred

ಮತ್ತೊಂದೆಡೆ ಪಕ್ಷ ವಿರೋಧಿ ಚಟುವಟಿಕೆ ಕಾರಣದಿಂದಾಗಿ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಕಾರ್ಯದರ್ಶಿ ಚಂದ್ರಶೇಖರ ದೇವಪ್ಪ ಪೂಜೇರ ಅವರನ್ನು ಉಚ್ಛಾಟಿಸಲಾಗಿದೆ' ಎಂದು ಅಧ್ಯಕ್ಷ ಸಂಜಯ ಪಾಟೀಲ ತಿಳಿಸಿದ್ದಾರೆ.

ಮಾಜಿ ಶಾಸಕ ಶೀಘ್ರವೇ ಬಿಜೆಪಿಗೆ ಸೇರ್ಪಡೆ: ಹೊಸ ಬಾಂಬ್ ಸಿಡಿಸಿದ ಸಚಿವ ಜಾರಕಿಹೊಳಿ

ಸವದತ್ತಿ-ಯಲ್ಲಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುನವಳ್ಳಿ ಪುರಸಭೆಯ 2ನೇ ಅವಧಿಗೆ ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ವಿಜಯ ಅಮಠೆ ವಿರುದ್ಧ ಅವರು ಕೆಲಸ ಮಾಡಿದ್ದಾರೆ. ತಾಯಿ ಪಾರ್ವತಿ ಪೂಜೇರ ಅವರನ್ನು ಕಾಂಗ್ರೆಸ್‌ನಿಂದ ಅಧ್ಯಕ್ಷ ಸ್ಥಾನಕ್ಕೆ ನಿಲ್ಲಿಸಿ ಬೆಂಬಲಿಸಿದ್ದಾರೆ. 

ಈ ಬಗ್ಗೆ ಅಲ್ಲಿನ ಶಾಸಕರೂ ಆದ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಪತ್ರ ಬರೆದಿದ್ದರು. ಸವದತ್ತಿ ಮಂಡಲದ ಅಧ್ಯಕ್ಷ ಈರಣ್ಣ ಚಂದರಗಿ ಸೂಚನೆಯನ್ನೂ ಧಿಕ್ಕರಿಸಿ ಪಕ್ಷ ವಿರೋಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ, ಪಕ್ಷದ ಜವಾಬ್ದಾರಿಗಳನ್ನು ಹಿಂಪಡೆಯಲಾಗಿದೆ' ಎಂದು ಸ್ಪಷ್ಟಪಡಿಸಿದ್ದಾರೆ.