ಯಾವುದೇ ವರ್ಕ ಆರ್ಡರ್‌ ಇಲ್ಲದೆ ಕೆಲಸ ಮಾಡಿಸಿದ್ದಾರೆ. ಈಗಾಗಲೇ ಅವುಗಳನ್ನು ಸ್ಥಗಿತಗೊಳಿಸಿದ್ದಾರೆ. ಕಳಪೆ ಕಾಮಗಾರಿಯಾಗಿದ್ದಾವೆ. ಸ್ಮಾರ್ಟ್‌ ಸಿಟಿ ಸಮಸ್ಯೆ ಇದೆ. ಬುಡಾದಲ್ಲಿ, ಮಹಾ ನಗರ ಪಾಲಿಕೆಯಲ್ಲಿ ಸಮಸ್ಯೆ ಇದೆ. ಎಲ್ಲ ಕಡೆ ಸಮಸ್ಯೆ ಸೃಷ್ಠಿ ಮಾಡಿದ್ದಾನೆ ಆ ಬಿಜೆಪಿಯ ಒಬ್ಬ ಶಾಸಕ. ಅದನ್ನು ರಿಪೇರಿ ಮಾಡಲು ಬಹಳ ಸಮಯಬೇಕಾಗುತ್ತದೆ: ಅಭಯ ಪಾಟೀಲ 

ಬೆಳಗಾವಿ(ಜೂ.07): ಪ್ರಧಾನಿ ಮೋದಿ ಅವರನ್ನು ನಾವು ಮೆಚ್ಚಿಸಬಹುದು, ಆದರೆ, ಬೆಳಗಾವಿಯಲ್ಲಿನ ಬಿಜೆಪಿ ಶಾಸಕನನನು ಮೆಚ್ಚಿಸುವುದು ಅಷ್ಟುಸುಲಭವಲ್ಲ, ಅನು ಟಫ್‌. ಮೋದಿ, ಶಾ ಅವರು ಕೇಳಬಹುದು, ಆದರೆ, ಈ ವ್ಯಕ್ತಿಯ ಆಡಳಿತ ನೋಡಿದ್ದೇವೆ. ಅದು ಹಾರೀಬಲ್‌ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಪರೋಕ್ಷವಾಗಿ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ವಿರುದ್ಧ ವಾಗ್ದಾಳಿ ನಡೆಸಿದರು.

Add Asianetnews Kannada as a Preferred SourcegooglePreferred

ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವನ ಕೈಯಲ್ಲಿರುವ ಅಧಿಕಾರಿಗಳನ್ನು ಬದಲಾವಣೆ ಮಾಡುವುದು ದೊಡ್ಡ ಚಾಲೆಂಜ್‌ ಇದೆ ನಮಗೆ. ಇಡೀ ರಾಜ್ಯ ಆಳುವುದು ಒಂದೇ ಈ ಎಂಎಲ್‌ಎ ಕಂಟ್ರೋಲ್‌ ಮಾಡುವುದು ಒಂದೇ ನಮಗೆ ಎಂದರು.

ಸರಳ ಪ್ರಕ್ರಿಯೆಯಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಯಾವುದೇ ವರ್ಕ ಆರ್ಡರ್‌ ಇಲ್ಲದೆ ಕೆಲಸ ಮಾಡಿಸಿದ್ದಾರೆ. ಈಗಾಗಲೇ ಅವುಗಳನ್ನು ಸ್ಥಗಿತಗೊಳಿಸಿದ್ದಾರೆ. ಕಳಪೆ ಕಾಮಗಾರಿಯಾಗಿದ್ದಾವೆ. ಸ್ಮಾರ್ಟ್‌ ಸಿಟಿ ಸಮಸ್ಯೆ ಇದೆ. ಬುಡಾದಲ್ಲಿ, ಮಹಾ ನಗರ ಪಾಲಿಕೆಯಲ್ಲಿ ಸಮಸ್ಯೆ ಇದೆ. ಎಲ್ಲ ಕಡೆ ಸಮಸ್ಯೆ ಸೃಷ್ಠಿ ಮಾಡಿದ್ದಾನೆ ಆ ಬಿಜೆಪಿಯ ಒಬ್ಬ ಶಾಸಕ. ಅದನ್ನು ರಿಪೇರಿ ಮಾಡಲು ಬಹಳ ಸಮಯಬೇಕಾಗುತ್ತದೆ ಎಂದರು.

ಭ್ರಷ್ಟಾಚಾರ ನಡೆದಿರುವ ಪ್ರಕರಣದಲ್ಲಿ ಸಂಪೂರ್ಣ ತನಿಖೆ ನಡೆಸಬೇಕು. ಈ ಹಿನ್ನೆಲೆಯಲ್ಲಿ ಜೂ. 7 ರಂದು ಸಭೆ ನಡೆಸಿ ನೋಡುತ್ತೇವೆ. ಅಲ್ಲಿ ಏನೇನೂ ಸಮಸ್ಯೆ ಹೊರಗಡೆ ಬರುತ್ತದೆ ಎಂಬುದನ್ನು ಕಾದು ನೋಡಬೇಕು. ಕಾನೂನು ಬಿಟ್ಟು ಕೆಲಸ ಮಾಡಿದ ಅಧಿಕಾರಿಗಳಿಗೆ ಜಿಲ್ಲೆಯಿಂದ ಹೊರಗೆ ಕಳುಹಿಸಿ ಒಳ್ಳೆಯ ಅಧಿಕಾರಿಗಳನ್ನು ಜನಪರ ಕೆಲಸ ಮಾಡುವ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುತ್ತೇವೆ ಎಂದರು.