Asianet Suvarna News Asianet Suvarna News

ಬೆಂಗಳೂರು ಗಲಭೆ: ನನಗೆ 3 ಕೋಟಿ ರೂ. ನಷ್ಟವಾಗಿದೆ ಎಂದ ಶಾಸಕ ಅಖಂಡ ಶ್ರೀನಿವಾಸಮೂರ್ತಿ

ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆಯಲ್ಲಿ ಮನೆ ಸುಟ್ಟು ಹೋಗಿರುವುದಕ್ಕೆ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಮಾಧ್ಯಮಗಳ ಜತೆ ಪ್ರತಿಕ್ರಿಯಿಸಿದ್ದು ಹೀಗೆ...

Bengaluru Riot: RS 3 crore Loss for Me Says Congress MLA Akhanda srinivas murthy
Author
Bengaluru, First Published Aug 14, 2020, 3:30 PM IST

ಬೆಂಗಳೂರು, (ಆ.14)  ಮಂಗಳವಾರ ರಾತ್ರಿ ನಡೆದ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆಯಲ್ಲಿ ಪುಲೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಗೆ ಬೆಂಕಿ ಹಚ್ಚಲಾಗಿದೆ. ಈ ಸಂಬಂಧ ಶಾಸಕ ಅಖಂಡ  ಶ್ರೀನಿವಾಸ ಮೂರ್ತಿ ಇಂದು (ಶುಕ್ರವಾರ) ಡಿಜೆ ಹಳ್ಳಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು, ಮನೆ, ಮನೆಯಲ್ಲಿದ್ದ ವಸ್ತು, ದಾಖಲಾತಿ ಎಲ್ಲವೂ ಹಾಳಾಗಿದೆ. ಒಟ್ಟು ಸುಮಾರು 3 ಕೋಟಿಯಷ್ಟು ನಷ್ಟವಾಗಿದೆ. ಪೊಲೀಸರು ಈ ಕುರಿತು ತನಿಖೆ ಮಾಡಿ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿ ಮಾಡಿಕೊಂಡರು.

ಬೆಂಗಳೂರು ಗಲಭೆ ಪ್ರಕರಣಕ್ಕೆ ಮತ್ತೊಂದು ಮೆಗಾ ಟ್ವಿಸ್ಟ್; 2 ದಿನದಿಂದ ನಡೆದಿತ್ತು ಸ್ಕೆಚ್..!

ಮನೆಯಲ್ಲಿ ನನ್ನ ಮಕ್ಕಳು, ಕುಟುಂಬಸ್ಥರು ಇದ್ದಿದ್ರೆ, ಅವರಿಗೆ ಏನಾದರೂ ಆಗಿದ್ರೆ ಏನು ಗತಿ? ಕಷ್ಟಪಟ್ಟು ದುಡಿದು ಕಟ್ಟಿರುವ ಮನೆ ಇದು. ಅದರಲ್ಲಿ ನಮ್ಮ ನೆನಪಿನ ಸರಮಾಲೆಗಳೇ ಇವೆ. ಅಪ್ಪ-ಾಮ್ಮ ಮನೆಯ ಹಿರಿಯರು ಓಡಾಡಿಕೊಂಡು ಇದ್ದ ಮನೆ. ಇದೀಗ ಆ ಮನೆಗೆ ಹಾನಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಾವು ಯಾರ ಮೇಲೂ ದ್ವೇಷಕ್ಕೆ ಹೋಗಿಲ್ಲ. ಎಲ್ಲರೂ ಅಣ್ಣ-ತಮ್ಮಂದಿರ ರೀತಿ ಇದ್ದೇನೆ. ಮುಸ್ಲಿಮರು, ಹಿಂದೂ, ಕ್ರಿಶ್ಚಿಯನ್ ಎಲ್ಲರೂ ಒಟ್ಟಾಗಿ ಇದ್ದೇವೆ. ಯಾರು ಈ ಕೃತ್ಯಗಳನ್ನು ಮಾಡಿದ್ದಾರೆ ಗೊತ್ತಿಲ್ಲ. ಪೊಲೀಸ್ ಇಲಾಖೆ ತನಿಖೆ ಮಾಡಿ, ಇದರ ಹಿಂದೆ ಯಾರಿದ್ದಾರೆ ಎನ್ನುವುದನ್ನ ಕಂಡು ಹಿಡಿಯಬೇಕು ಎಂದರು. 

Follow Us:
Download App:
  • android
  • ios