ಒಂದೇ ಪಕ್ಷ ಅಧಿಕಾರಕ್ಕೆ ಏರಿದ್ದರೂ ನಿಲ್ಲದ ಹೈಡ್ರಾಮಾ/ ಸಚಿವ ಜಗದೀಶ್ ಶೆಟ್ಟರ್ ಮನೆಯಲ್ಲಿ ಅವಕಾಶ ವಂಚಿತರ ರಹಸ್ಯ ಸಭೆ/ ಸುವರ್ಣ ನ್ಯೂಸ್ ಕ್ಯಾಮರಾ ಕಂಡೊಡನೆ ಸ್ಥಳ ಬದಲಾವಣೆ/ ರಾಜ್ಯ ರಾಜಕಾರಣದ ಸದ್ಯದ ಸ್ಫೋಟಕ ಸುದ್ದಿ

ಬೆಂಗಳೂರು(ಫೆ. 17) ಸಚಿವ ಸ್ಥಾನ ವಂಚಿತ 22 ಜನ ಶಾಸಕರು ರಹಸ್ಯ ಸಭೆ ಸೇರಿದ್ದಾರೆ. ಸಚಿವ ಜಗದೀಶ್ ಶೆಟ್ಟರ್ ನಿವಾಸದಲ್ಲಿ ಉತ್ತರ ಕರ್ನಾಟಕದ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಮೀಟಿಂಗ್ ಮಾಡಿದ್ದಾರೆ.

Add Asianetnews Kannada as a Preferred SourcegooglePreferred

"

ಉಮೇಶ್ ಕತ್ತಿ, ಬಸನಗೌಡ ಪಾಟೀಲ್ ಯತ್ನಾಳ್, ಮುರುಗೇಶ್ ನಿರಾಣಿ, ರಾಜು ಗೌಡ, ಸಿ ಪಿ ಯೋಗೇಶ್ವರ್, ಅಂಗಾರ ಸಭೆಯಲ್ಲಿ ಭಾಗಿಯಾಗಿದ್ದಾರೆ. ಯಡಿಯೂರಪ್ಪ ಮಾಜಿ ಆಪ್ತ ಸಂತೋಷ ಸೇರಿ 22 ಮಂದಿ ಸಭೆಯಲ್ಲಿ ಇದ್ದರು.

ಮತ್ತೆ ಆಪರೇಶನ್ ಕಮಲ, ಸುಳಿವು ಕೊಟ್ಟ ಕಟೀಲ್

ಸುವರ್ಣ ನ್ಯೂಸ್ ಕ್ಯಾಮೆರಾ ಕಾಣುತ್ತಿದ್ದಂತೆ ಸಭೆ ಅಂತ್ಯಗೊಳಿಸಿದ ಮುಖಂಡರು ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ. ಸಭೆ ಅಂತ್ಯಗೊಳಿಸಿ ಬೇರೆ ರಹಸ್ಯ ಸ್ಥಳಕ್ಕೆ ದೌಡಾಯಿಸಿದ್ದು ಕೆಲ ಶಾಸಕರು ಶಟ್ಟರ್ ಮನೆಯಲ್ಲೇ ಉಳಿದುಕೊಂಡಿದ್ದಾರೆ.