Asianet Suvarna News Asianet Suvarna News

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್, ಕುತೂಹಲ ಮೂಡಿಸಿದ ಹೊರಟ್ಟಿ ನಡೆ

* ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್
* ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ನಾಲ್ಕು ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆ
* ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿ ಹೆಸರು ಘೋಷಣೆ
* ಕುತೂಹಲ ಮೂಡಿಸಿದ ಬಸವರಾಜ್ ಹೊರಟ್ಟಿ ಕ್ಷೇತ್ರ

BJP Announces Candidates For Karnataka MLC Elections rbj
Author
First Published Mar 11, 2022, 7:48 PM IST

ಬೆಂಗಳೂರು, (ಮಾ.11): ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ (Karnataka MLC Elections) ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದೆ.

ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಈ ಪೈಕಿ 3ಕ್ಕೆ ಮಾತ್ರ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ  ಅಭ್ಯರ್ಥಿಗಳ (BJP Candidates) ಪಟ್ಟಿಯನ್ನು ಇಂದು(ಶುಕ್ರವಾರ) ಬಿಡುಗಡೆ ಮಾಡಿದೆ.

Karnataka MLC Poll ಕರ್ನಾಟಕದಲ್ಲಿ ಮತ್ತೆ ಚುನಾವಣೆ, ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ

ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ಅರುಣ್ ಶಹಾಪುರ, ವಾಯುವ್ಯ ಪದವೀಧರರ ಕ್ಷೇತ್ರಕ್ಕೆ ಹನುಮಂತ ನಿರಾಣಿ ಮತ್ತು ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಎಂ.ವಿ. ರಾಜಶೇಖರ್ ಅವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಮಾಜಿ ಎಂಎಲ್​ಸಿ ಗೋ. ಮಧುಸೂಧನ್  ಅವರಿಗೆ ಟಿಕೆಟ್ ಕೈತಪ್ಪಿದೆ. 

ಇನ್ನು ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಕೆಲ ಗೊಂದಗಳು ಇದ್ದು, ಅವು ಬಗೆಹರಿಯದ ಕಾರಣ ಅಭ್ಯರ್ಥಿ ಘೋಷಣೆ ಮಾಡಿಲ್ಲ.  ಆದರೆ ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಮತ್ತು ಮಾಜಿ ಎಂಎಲ್ಸಿ ಮೋಹನ್ ಲಿಂಬಿಕಾಯಿ ಈ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಮತ್ತೊಂದೆಡೆ ಈ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಬಿಜೆಪಿ ಸೇರ್ಪಡೆ ಅಥವಾ ಬೆಂಬಲ ನೀಡುವ ವಿಚಾರವಾಗಿ ಮಾತುಕತೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಪ್ರಕಟಿಸಿಲ್ಲ ಎನ್ನುವ ಮಾಹಿತಿ ಇದೆ.

ಹೊರಟ್ಟಿ ಮತ್ತೆ ನಿಲ್ಲುತ್ತಾರಾ?
 ಪರಿಷತ್ ಸಭಾಪತಿ ಅವರ  ಸದಸ್ಯತ್ವ ಅವಧಿ ಜೂನ್ ವೇಳೆಗೆ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಅವರು ಮತ್ತೆ ಪರಿಷತ್ ಚುನಾವಣೆ ಅಖಾಡಕ್ಕಿಳಿಯುತ್ತಾರಾ ಅಥವಾ ಇಲ್ಲಿ ರಾಜಕೀಯಕ್ಕೆ ವಿರಾಮ ಹೇಳುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ. ಈ ಬಗ್ಗೆ ಇನ್ನು ಅವರು ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಬಸವರಾಜ ಹೊರಟ್ಟಿ ಅವರು ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ಆಯ್ಕೆಯಾಗುತ್ತಾ ಬಂದಿದ್ದಾರೆ.

ಹೊರಟ್ಟಿಗೆ ಬಿಜೆಪಿ ಮೇಲೆ ಒಲವು? 
ಪ್ರಮುಖವಾಗಿ ಬಸವರಾಜ ಹೊರಟ್ಟಿ ಅವರು ಬಿಜೆಪಿ ಬೆಂಬಲದೊಂದಿಗೆ  ಚುನಾವಣೆಗೆ ಸ್ಪರ್ಧೆಸಲು ಒಲವು ತೋರಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿವೆ. ಆದ್ರೆ, ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ ಹೆಸರು ಬಲವಾಗಿ ಕೇಳಿಬರುತ್ತಿದೆ.

ಹೊರಟ್ಟಿಗೆ 75 ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸೇರಲು ಅವರಿಗೆ ವಯಸ್ಸಿನ ಅಡ್ಡಿಯಾಗಿದೆ ಎನ್ನಲಾಗಿದೆ. ಈ ಕುರಿತು ಕೆಲ ಬಿಜೆಪಿಗರು ವರಿಷ್ಠರ ಗಮನಕ್ಕೆ ತಂದಿದ್ದರು ಎನ್ನಲಾಗಿದ್ದು, ಹೀಗಾಗಿ ಹೊರಟ್ಟಿ ಬಿಜೆಪಿ ಸೇರಿದರೂ ಟಿಕೆಟ್​ ನಿರಾಕರಿಸುವ ಸಾಧ್ಯತೆ ಇದೆ. ಇದು ಖಚಿತ ಮಾಹಿತಿ ಅಲ್ಲ. ಆದ್ರೆ, ರಾಜ್ಯ ರಾಜಕಾರಣದಲ್ಲಿ ಅಂತೆ-ಕಂತೆ ಮಾತುಗಳು ಕೇಳಿಬರುತ್ತಿವೆ.

ಇತ್ತ ಕಾಂಗ್ರೆಸ್​ನಲ್ಲಿ ಪರಿಷತ್​ನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಮಧುಮಾದೇಗೌಡರು ಹಾಗೂ ಧಾರವಾಡದ ಗುರಿಕಾರ್ ಅವರ ಹೆಸರನ್ನು ಎಐಸಿಸಿ ಅಂತಿಮಗೊಳಿಸಿದೆ. ಇನ್ನೆರಡು ಕ್ಷೇತ್ರಗಳಿಗೆ ನಾಯಕರ ಜತೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow Us:
Download App:
  • android
  • ios