ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನದಿಂದ ಬಿಜೆಪಿಯಲ್ಲಿ ಆಂತರಿಕ ಬಿಕ್ಕಟ್ಟು ಸ್ಫೋಟಗೊಂಡಿದೆ. ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವಿಗೆ ಕಾರಣರಾದ ಪಕ್ಷದ್ರೋಹಿಗಳನ್ನು ಪತ್ತೆಹಚ್ಚಲು ಸಿ.ಟಿ. ರವಿ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿ ರಚಿಸಲಾಗಿದೆ. ಈ ರಹಸ್ಯ ಶೀಘ್ರದಲ್ಲೇ ಬಯಲಾಗುವ ನಿರೀಕ್ಷೆಯಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಜೂ.25): ಶಿಸ್ತಿನ ಪಕ್ಷ ಎಂದೇ ಬೀಗುತ್ತಿದ್ದ ಬಿಜೆಪಿಯಲ್ಲಿ ಈಗ ವಿಧಾನ ಪರಿಷತ್ ಚುನಾವಣೆಯ ಅಡ್ಡಮತದಾನದ (Cross Voting) ಜ್ವಾಲಾಮುಖಿ ಸ್ಫೋಟಗೊಂಡಿದೆ. ಕಾಂಗ್ರೆಸ್ ತನ್ನ ಬಲ ಮೀರಿ 5ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಗೆಲ್ಲಿಸಿಕೊಂಡಿರುವುದು ಕಮಲ ಪಾಳೆಯದ ನಾಯಕರ ನಿದ್ದೆ ಕೆಡಿಸಿದೆ. ಪಕ್ಷದ್ರೋಹಿಗಳನ್ನು ಪತ್ತೆಹಚ್ಚಲು ಸಿ.ಟಿ. ರವಿ ನೇತೃತ್ವದ ಸತ್ಯಶೋಧನಾ ಸಮಿತಿ ಅಸ್ತ್ರ ಪ್ರಯೋಗಿಸಲಾಗಿದೆ.

Cross Voting: ಧರ್ಮಸ್ಥಳ ಆಣೆ ಬೇಡ, ಬ್ರೇನ್ ಮ್ಯಾಪಿಂಗ್ ಮಾಡಿಸಿ: ವಿಜಯೇಂದ್ರ-ಅಶೋಕ್ ವಿರುದ್ಧ ಎಂ.ಲಕ್ಷ್ಮಣ್ ಕಿಡಿ

ಅಡ್ಡಮತದಾನ ಮಾಡಿದವರನ್ನು ಪತ್ತೆಹಚ್ಚಲು ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಆಣೆ-ಪ್ರಮಾಣ ಮಾಡಲು ಕೆಲವರು ಮುಂದಾಗಿದ್ದರೆ, ಇದಕ್ಕೆ ಬಿಜೆಪಿಯ ಹಿರಿಯ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ, ಕ್ರಾಸ್ ವೋಟಿಂಗ್ ಮೀಟಿಂಗ್ ಮೊದಲೇ ಫಿಕ್ಸ್ ಆಗಿತ್ತೇ ಮತ್ತು ಕಾಂಗ್ರೆಸ್ ಸಂಪರ್ಕದಲ್ಲಿದ್ದ ಬಿಜೆಪಿಗರು ಯಾರು ಎಂಬ ರಹಸ್ಯ ಸದ್ಯದಲ್ಲೇ ಬಯಲಾಗಲಿದ್ದು, ಹೈಕಮಾಂಡ್ ಯಾವ ಶಿಕ್ಷೆ ನೀಡಲಿದೆ ಎಂಬ ಕುತೂಹಲ ಮೂಡಿಸಿದೆ.

Related Video