ಈಗಾಗಲೇ ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ಮೂರು ಜನಪ್ರತಿನಿಧಿಗಳಿದ್ದಾರೆ. ಇದರ ಮಧ್ಯೆಯೂ ಮತ್ತೋರ್ವ ಶಾಸಕರನ್ನ ಯಡಿಯೂರಪ್ಪ ತಮ್ಮ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿಕೊಂಡಿದ್ದಾರೆ.

ಬೆಂಗಳೂರು, (ಡಿ.19): ಎಂ.ಪಿ. ರೇಣುಕಾಚಾರ್ಯ, ಎಸ್.ಆರ್.ವಿಶ್ವನಾಥ್, ಶಂಕರಗೌಡ ಹಾಗೂ ಎನ್‌.ಆರ್.ಸಂತೋಷ್ ಸಿಎಂ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿಗಳಾಗಿದ್ದಾರೆ.

Add Asianetnews Kannada as a Preferred SourcegooglePreferred

ಇದೀಗ ಎಸ್.ಆರ್.ವಿಶ್ವನಾಥ್ ಅವರನ್ನ ಬಿಡಿಎ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಇದರಿಂದ ಇವರು ಸ್ಥಾನಕ್ಕೆ ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಡಿ.ಎನ್ ಜೀವರಾಜ್ ಅವರನ್ನ ಮುಖ್ಯಮಂತ್ರಿ ಬಿಎಸ್ ಯಡಿಯೂಪರಪ್ಪನವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಯಡಿಯೂರಪ್ಪ ಕೊಟ್ರು ಬಂಪರ್: ನಿಗಮ ಮಂಡಳಿ ಅಧ್ಯಕ್ಷರಿಗೆ ಜಾಕ್​ಪಾಟ್ 

ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ರಾಜ್ಯ ಶಿಷ್ಟಾಚಾರ) ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ-1 ಮೊಹಮ್ಮದ ನಯೀಮ್ ಮೊಮಿನ್ ಅವರು, ಶೃಂಗೇರಿ ಕ್ಷೇತ್ರದ ಮಾಜಿ ಶಾಸಕರಾದಂತ ಡಿಎನ್ ಜೀವರಾಜ್ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮಾನ್ಯ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.