ಬಿಎಸ್ವೈಗೆ ಮತ್ತೆ ಭೀಮ ಬಲ, ಹೈಕಮಾಂಡ್ನಿಂದ ಮಹತ್ವದ ಹೊಣೆ!
ನಾಯಕತ್ವ ಬದಲಾವಣೆ ಇಲ್ಲ ಎನ್ನುವ ಮೂಲಕ ಭೀಮ ಬಲ ತುಂಬಿದ ಹೈಕಮಾಂಡ್| ಬಿಎಸ್ ವೈ ನಾಯಕತ್ವ ಬದಲಾವಣೆ ಮಾಡುವ ಪ್ರಶ್ನೆ ಇಲ್ಲ ಎನ್ನುತ್ತಿವೆ ದೆಹಲಿಯ ಮೂಲಗಳು| ರಾಜ್ಯಸಭಾ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ನಾಯಕತ್ವದ ವಿಚಾರ ಚರ್ಚೆಗೆ ಬಂದಿದೆ
ನವದೆಹಲಿ(ಜೂ.11): ರಾಜ್ಯಸಭಾ ಅಭ್ಯರ್ಥಿಗಳ ಆಯ್ಕೆ ಈ ಬಾರೀ ಹೈಕಮಾಂಡ್ ನಿರ್ಣಯ ತೆಗೆದುಕೊಂಡಿದ್ದು, ಇದರಿಂದ ಬಿಜೆಪಿ ರಾಜ್ಯ ಘಟಕಕ್ಕೆ ಭಾರೀ ಮುಜುಗರ ಉಂಟಾಗಿತ್ತು. ಇದರ ಬೆನ್ನಲ್ಲೇ ರಾಜ್ಯ ನಾಯಕರ ಮಾತಿಗೆ ಹೈಕಮಾಂಡ್ ಬೆಲೆ ನೀಡುತ್ತಿಲ್ಲ ಎಂಬ ಆರೋಪವೂ ಕೇಳಿ ಬಂದಿತ್ತು. ಆದರೀಗ ಇವೆಲ್ಲದರ ಬೆನ್ನಲ್ಲೇ ರಾಜಾಹುಲಿಗೆ ಹೈಕಮಾಂಡ್ ಮಹತ್ತರ ಹೊಣೆ ವಹಿಸಿ ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಇಲ್ಲ ಎನ್ನುವ ಮೂಲಕ ಭೀಮ ಬಲ ತುಂಬಿದೆ.
ಎಂಎಲ್ಸಿ ಟಿಕೆಟ್ ಆಕಾಂಕ್ಷಿಗಳಿಗೆ ಕಟೀಲ್ ಶಾಕ್!
ಹೌದು 77 ರ ವಯಸ್ಸಿನಲ್ಲೂ ಕರ್ನಾಟಕದಲ್ಲಿ ಯಡಿಯೂರಪ್ಪ ಕೊರೋನಾ ವೈರಸ್ ನಿಯಂತ್ರಣ ಮಾಡಿದ ರೀತಿಗೆ ಹೈಕಮಾಂಡ್ ಮೆಚ್ಚಿಗೆ ವ್ಯಕ್ತಪಡಿಸಿದೆ. ಅಲ್ಲದೇ ಬಿಎಸ್ ವೈ ನಾಯಕತ್ವ ಬದಲಾವಣೆ ಮಾಡುವ ಪ್ರಶ್ನೆಯೂ ಇಲ್ಲ ಎಂದು ದೆಹಲಿ ಮೂಲಗಳು ತಿಳಿಸಿವೆ. ಹೀಗಿದ್ದರೂ ರಾಜ್ಯಸಭಾ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಯಡಿಯೂರಪ್ಪ ನಾಯಕತ್ವದ ವಿಚಾರ ಚರ್ಚೆಗೆ ಬಂದಿತ್ತು. ಆದರೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ನೀಡಬೇಕು ಅನ್ನುವ ಉದ್ದೇಶದಿಂದ ಈ ನಿರ್ಣಯ ತೆಗೆದುಕೊಳ್ಳಲಾಗಿದ್ದು, ಬಿಎಸ್ ವೈ ನಾಯಕತ್ವಕ್ಕೂ ಮತ್ತು ರಾಜ್ಯಸಭಾ ಅಭ್ಯರ್ಥಿಗಳ ಆಯ್ಕೆಗೂ ಸಂಬಂಧ ಇಲ್ಲ ಎಂಬುವುದನ್ನು ಸ್ಪಷ್ಟಪಡಿಸಿದೆ.
ಅಲ್ಲದೇ ವಿಧಾನಪರಿಷತ್ ಸದಸ್ಯರ ಆಯ್ಕೆ ಹೊಣೆ ಬಿಎಸ್ ವೈ ಗೆ ವಹಿಸುವ ಸಾಧ್ಯತೆ ಇದೆ ಎಂದು ಬಿಜೆಪಿ ಉನ್ನತ ಮೂಲಗಳ ಮಾಹಿತಿ ನೀಡಿವೆ.
News In 100 Seconds: ಈ ಕ್ಷಣದ ಪ್ರಮುಖ ಹೆಡ್ಲೈನ್
"