ಕುಮಾರಸ್ವಾಮಿಯವರಿಗೆ ಸುಲಭದಲ್ಲಿ ಸಿಗುವ ಹೈಕಮಾಂಡ್ ಬಿಜೆಪಿ ನಾಯಕರಿಗೆ ಸಿಗದಿರುವುದೇಕೆ? ಕರ್ನಾಟಕದಲ್ಲಿ ಸಾಂವಿಧಾನಿಕ ಹುದ್ದೆಯಾದ ವಿಪಕ್ಷ ನಾಯಕನ ಸ್ಥಾನ ಹಲವು ತಿಂಗಳುಗಳಿಂದ ಖಾಲಿ ಇರುವುದು ಬಿಜೆಪಿಗೆ ಗಂಭೀರ ವಿಷಯವಲ್ಲವೇ ಎಂದು ಕಿಡಿ ಕಾರಿದ ಕಾಂಗ್ರೆಸ್‌ 

ಬೆಂಗಳೂರು(ಅ.28): ‘ಯಡಿಯೂರಪ್ಪನವರನ್ನು ಭೇಟಿಯಾಗದೆ ಅವಮಾನಿಸಿ ಕಳಿಸಿದ್ದ ಬಿಜೆಪಿ ಹೈಕಮಾಂಡ್ ಈಗ ಸದಾನಂದಗೌಡರ ಮುಖವನ್ನೂ ನೋಡದೆ ವಾಪಸ್ ಕಳಿಸಿದೆ. ಇಂತಹ ಅವಮಾನ, ತಿರಸ್ಕಾರಗಳಿಗೆ ಒಳಪಟ್ಟರೂ ಸಹಿಸಿಕೊಳ್ಳುತ್ತಿರುವುದು ಗುಲಾಮಗಿರಿಯ ಸಂಕೇತವಲ್ಲವೇ?’ ಎಂದು ರಾಜ್ಯ ಕಾಂಗ್ರೆಸ್‌ ಬಿಜೆಪಿಯನ್ನು ಪ್ರಶ್ನೆ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌, ‘ರಾಜ್ಯ ಬಿಜೆಪಿಯ ನಾಯಕರು ಕುಮಾರಸ್ವಾಮಿಯವರನ್ನು ಕರೆದುಕೊಂಡು ಹೋಗಿದ್ದರೆ ಕನಿಷ್ಠ ದೆಹಲಿ ನಾಯಕರ ಮುಖವನ್ನಾದರೂ ನೋಡುವ ಸೌಭಾಗ್ಯ ಸಿಗುತ್ತಿತ್ತೇನೋ ಎಂದು ಹೇಳಿದೆ.

ಕಲೆಕ್ಷನ್‌ನಲ್ಲೂ ಸಿದ್ದು, ಡಿಕೆಶಿ ನಡುವೆ ತೀವ್ರ ಸ್ಪರ್ಧೆ: ಸದಾನಂದಗೌಡ

ಯಡಿಯೂರಪ್ಪ ಹಾಗೂ ಸದಾನಂದಗೌಡ ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಹಿರಿಯ ನಾಯಕರು. ಇಂತಹವರನ್ನೇ ಅವಮಾನಿಸುತ್ತಿರುವುದರಿಂದ ಬಿಜೆಪಿಗರ ಸ್ವಾಭಿಮಾನಕ್ಕೆ ಧಕ್ಕೆಯಾದಂತೆ ಅಲ್ಲವೇ? ಇಂತಹ ಅವಮಾನ, ತಿರಸ್ಕಾರಗಳಿಗೆ ಒಳಪಟ್ಟರೂ ಸಹಿಸಿಕೊಳ್ಳುತ್ತಿರುವುದು ಗುಲಾಮಗಿರಿಯ ಸಂಕೇತವಲ್ಲವೇ ಎಂದು ಪ್ರಶ್ನಿಸಿದೆ.