Asianet Suvarna News Asianet Suvarna News

ರಾಜ್ಯದಲ್ಲಿ ಮತ್ತೆ ಬಿಜೆಪಿಗೆ ಬಹುಮತ ಖಚಿತ: ಕೆ.ಎಸ್‌.ಈಶ್ವರಪ್ಪ

ಬಿಜೆಪಿ ಸರ್ಕಾರ ಜನಪರ ಕಾರ್ಯಕ್ರಮಗಳ ಮೂಲಕ ರಾಜ್ಯದ ಜನತೆಯ ವಿಶ್ವಾಸ ಗಳಿಸಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸುವ ಮೂಲಕ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

BJP is sure of Majority again in the Karnataka Says KS Eshwarappa gvd
Author
First Published Jan 29, 2023, 9:49 PM IST

ಅಥಣಿ (ಜ.29): ಬಿಜೆಪಿ ಸರ್ಕಾರ ಜನಪರ ಕಾರ್ಯಕ್ರಮಗಳ ಮೂಲಕ ರಾಜ್ಯದ ಜನತೆಯ ವಿಶ್ವಾಸ ಗಳಿಸಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸುವ ಮೂಲಕ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕಿಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಆಗಮಿಸಿದಾಗ ಕನ್ನಡಪ್ರಭದೊಂದಿಗೆ ಮಾತನಾಡಿದ ಅವರು, ಬಿಜೆಪಿ ಒಂದು ಸಿದ್ಧಾಂತದ ಪಕ್ಷ. ತಳಹಂತದ ಕಾರ್ಯಕರ್ತರಿಂದ ಸಂಘಟಿತವಾಗಿರುವ ಪಕ್ಷವಾಗಿರುವುದರಿಂದ ಇಲ್ಲಿ ಶಿಸ್ತು ಮತ್ತು ಸಿದ್ಧಾಂತದಿಂದ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದೇವೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಭ್ರಷ್ಟಾಚಾರದ ಮೂಲ ಕಾಂಗ್ರೆಸ್‌ ಪಕ್ಷವಾಗಿದೆ. ತಮ್ಮ ಅಧಿಕಾರ ಅವಧಿಯಲ್ಲಿ ಮಾಡಿದ ಭ್ರಷ್ಟಾಚಾರಗಳು ತನಿಖೆ ಆಗಬಾರದು ಎಂಬ ಉದ್ದೇಶದಿಂದ ಇದೇ ಸಿದ್ದರಾಮಯ್ಯನವರು ಲೋಕಾಯುಕ್ತ ಸಂಸ್ಥೆಯನ್ನು ತೆಗೆದು ಹಾಕಿದ್ದರು. ಲೋಕಾಯುಕ್ತ ಸಂಸ್ಥೆಗೆ ನಮ್ಮ ಸರ್ಕಾರ ಮತ್ತೆ ಶಕ್ತಿ ತುಂಬಿದೆ. ಸಿದ್ದರಾಮಯ್ಯನವರ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ಅನೇಕ ದೂರುಗಳು ಬಂದಿವೆ. ಮೊದಲು ಅವರು ಆ ದೂರುಗಳಿಗೆ ಉತ್ತರವನ್ನು ನೀಡಲಿ ಎಂದು ತಿರುಗೇಟು ನೀಡಿದರು.

ಎಲ್ಲ ವರ್ಗಗಳ ಹಿತರಕ್ಷಣೆ ಬಿಜೆಪಿಯ ಆದ್ಯತೆ: ಸಿ.ಟಿ.ರವಿ

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಇದ್ದಾಗ ಜನಪ್ರಿಯ ಕಾರ್ಯಕ್ರಮಗಳನ್ನು ನೀಡಿದ್ದೇನೆ ಎನ್ನುತ್ತಾರೆ. ಹಾಗಾದರೆ ತಮ್ಮ ಸ್ವಕ್ಷೇತ್ರ ಚಾಮುಂಡೇಶ್ವರಿ ಮತಕ್ಷೇತ್ರದಲ್ಲಿ ಏಕೆ ಸೋತರು? ಬಾದಾಮಿ ಮತ ಕ್ಷೇತ್ರದಲ್ಲಿ ಅಲ್ಪ ಮತಗಳ ಅಂತರದಿಂದ ಗೆದ್ದಿರುವ ಸಿದ್ದರಾಮಯ್ಯ ಅಲ್ಲಿಯೇ ಸ್ಪರ್ಧೆ ಮಾಡದೆ ಸೋಲಿನ ಭಯದಿಂದ ಬೇರೆ ಮತಕ್ಷೇತ್ರದತ್ತ ಮುಖ ಮಾಡಿದ್ದಾರೆ. ಅವರಿಗೆ ಗೆಲ್ಲುವ ಆತ್ಮವಿಶ್ವಾಸವಿದ್ದರೆ ಬಾದಾಮಿ ಮತಕ್ಷೇತ್ರದಿಂದಲೇ ಸ್ಪರ್ಧೆ ಮಾಡಲಿ ಎಂದು ಸವಾಲು ಎಸೆದರು. ಬೆಳಗಾವಿ ರಾಜಕಾರಣದಲ್ಲಿರುವ ಭಿನ್ನಮತ ಕೇಂದ್ರದ ವರಿಷ್ಠರು ಬಂದು ಹೋದ ನಂತರ ಶಮನವಾಗಲಿದೆ. 

ತಾರಕ ರತ್ನ ಆರೋಗ್ಯದಲ್ಲಿ ಅಲ್ಪ ಚೇತರಿಕೆ: ಆಸ್ಪತ್ರೆಗೆ ಕುಟುಂಬ ಮತ್ತು ಗಣ್ಯರ ದಂಡು

ಒಂದು ಕುಟುಂಬದಲ್ಲಿನ ಸಹೋದರರ ಮಧ್ಯೆ ಭಿನ್ನಾಭಿಪ್ರಾಯಗಳು ಇರುವಂತೆ ಪ್ರತಿಯೊಂದು ಪಕ್ಷದಲ್ಲಿಯೂ ಮುಖಂಡರಲ್ಲಿ ಭಿನ್ನಾಭಿಪ್ರಾಯ ಇರುತ್ತದೆ. ಪಕ್ಷದ ವರಿಷ್ಠರ ಸಮ್ಮುಖದಲ್ಲಿ ಚರ್ಚಿಸಿ ಅಂತಿಮ ನಿರ್ಣಯ ತೆಗೆದುಕೊಂಡ ನಂತರ ಭಿನ್ನಮತ ಶಮನಗೊಳಿಸಿ ಎಲ್ಲರೂ ಒಗ್ಗಟ್ಟಿನಿಂದ ಮುಂಬರುವ ವಿಧಾನಸಭಾ ಚುನಾವಣೆಯನ್ನು ಎದುರಿಸುತ್ತೇವೆ ಎಂದ ಅವರು, ರಾಜ್ಯ ಸರ್ಕಾರದ ಮತ್ತು ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಮನೆ ಮನಗಳಿಗೆ ಮುಟ್ಟಿಸುವ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ಮಾಡುತ್ತಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತ್ಯಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲೇ ಇದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

Follow Us:
Download App:
  • android
  • ios