ಸಿದ್ದರಾಮಯ್ಯ ಅವರು ದಲಿತರಿಗಾಗಿ ಮೀಸಲಿಟ್ಟ 11 ಸಾವಿರ ಕೋಟಿ ರೂ. ಅನುದಾನವನ್ನು ವಾಪಾಸ್ ತೆಗೆದುಕೊಂಡರು. ಓಟ್ ಬ್ಯಾಂಕ್ ರಾಜನೀತಿಗಾಗಿ ಅಲ್ಪ ಸಂಖ್ಯಾತರಿಗೆ 10 ಸಾವಿರ ಕೋಟಿ ಕೊಡಲು ಹೊರಟರು. ಒಬ್ಬರಿಗೆ ನ್ಯಾಯ, ಇನ್ನೊಬ್ಬರಿಗೆ ಅನ್ಯಾಯ ಮಾಡುವವರು ಶ್ರೀರಾಮನಿಗೆ ಸಮನಾಗಲು ಸಾದ್ಯವೆ ಎಂದ ಸಿ.ಟಿ.ರವಿ 

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಿಕ್ಕಮಗಳೂರು(ಜ.02):  ಅಯೋದ್ಯೆ ಹೋರಾಟದಲ್ಲಿ ಪಾಲ್ಗೊಂಡಿದ್ದರು ಎನ್ನುವ ಕಾರಣಕ್ಕೆ 31 ವರ್ಷಗಳ ನಂತರ ಕಾರ್ಯಕರ್ತರ ಮೇಲೆ ಕೇಸು ಹಾಕುವವರು ರಾಮನ ಹೆಸರಿಟ್ಟುಕೊಂಡ ಮಾತ್ರಕ್ಕೆ ಅವರಲ್ಲಿ ರಾಮನ ಗುಣ ಬಂದಿದೆ ಎಂದು ಭಾವಿಸಲು ಸಾಧ್ಯವೇ ಎಂದು ಮಾಜಿ ಶಾಸಕ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಹೆಸರಲ್ಲೇ ರಾಮನಿದ್ದಾನೆ ಎಂಬ ಮಾಜಿ ಸಚಿವ ಹೆಚ್.ಆಂಜನೇಯ ಹೇಳಿಕೆಗೆ ಇಂದು(ಮಂಗಳವಾರ) ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸಿ.ಟಿ.ರವಿ ಅವರು, ಪ್ರಭು ಶ್ರೀರಾಮ ಚಂದ್ರ ಯಾರಿಗೂ ಅನ್ಯಾಯ ಮಾಡಲಿಲ್ಲ. ಎಲ್ಲರಿಗೂ ನ್ಯಾಯಕೊಟ್ಟ, ಎಲ್ಲರ ಮೇಲೂ ವಿಶ್ವಾಸ ಇಟ್ಟಿದ್ದ, ಎಲ್ಲರಿಗೂ ಪ್ರೀತಿ ತೋರಿಸಿದ್ದ. ಧರ್ಮಕ್ಕಾಗಿ ಹೋರಾಟ ಮಾಡಿದ್ದ. ಆದರೆ ನಿಮ್ಮ ಸಿದ್ದರಾಮಯ್ಯ ಅವರು ದಲಿತರಿಗಾಗಿ ಮೀಸಲಿಟ್ಟ 11 ಸಾವಿರ ಕೋಟಿ ರೂ. ಅನುದಾನವನ್ನು ವಾಪಾಸ್ ತೆಗೆದುಕೊಂಡರು. ಓಟ್ ಬ್ಯಾಂಕ್ ರಾಜನೀತಿಗಾಗಿ ಅಲ್ಪ ಸಂಖ್ಯಾತರಿಗೆ 10 ಸಾವಿರ ಕೋಟಿ ಕೊಡಲು ಹೊರಟರು. ಒಬ್ಬರಿಗೆ ನ್ಯಾಯ, ಇನ್ನೊಬ್ಬರಿಗೆ ಅನ್ಯಾಯ ಮಾಡುವವರು ಶ್ರೀರಾಮನಿಗೆ ಸಮನಾಗಲು ಸಾದ್ಯವೆ ಎಂದರು. ನಿಮ್ಮ ಹೆಸರಲ್ಲಿ ಆಂಜನೇಯ ಎಂಬ ಹೆಸರಿದೆ. ಆದರೆ ನಿಮ್ಮಲ್ಲಿ ಆಂಜನೇಯನ ಗುಣ ಇದೆಯಾ? ಹಾಗೆ ಸಿದ್ದರಾಮಯ್ಯನವರ ಹೆಸರಲ್ಲಿ ರಾಮನ ಹೆಸರಿದೆ ಅವರಲ್ಲಿ ರಾಮನ ಗುಣವಿದೆಯಾ ಎಂದು ಪ್ರಶ್ನಿಸಿದರು.

ಸತ್ಯದ ತಳಹದಿ ಸರ್ವರ ಒಳಿತು ಇರುವುದೇ ಧರ್ಮ: ಮಾಜಿ ಶಾಸಕ ಸಿ.ಟಿ.ರವಿ

ಸಿಎಂ ಮನೆಗೆ ಮಂತ್ರಾಕ್ಷತೆ : 

ರಾಮಮಂದಿರ ಉದ್ಘಾಟನೆ ಗೆ ಆಹ್ವಾನ ನೀಡಲು ಪ್ರಧಾನಿ ಮೋದಿಗೆ ಅಧಿಕಾರ ಇಲ್ಲ , ಕರಸೇವೆ ಮಾಡಿದ ನಮಗೆ ಆಹ್ವಾನ ಬಂದಿಲ್ಲ, ಕಾಂಗ್ರೆಸ್ ರಾಮಮಂದಿರ ನಿರ್ಮಾಣ ಆಗಬೇಕೆಂದು ಯಾವತ್ತು ಬಯಸಿತ್ತು ಎಂದಿರುವ ರವಿ ಸಿದ್ದರಾಮಯ್ಯ ಹಾಗೂ ಎಚ್. ಆಂಜನೇಯ ಮನೆಗೆ ಮಂತ್ರಾಕ್ಷತೆ ತಲುಪುತ್ತದೆ ಲೋಕಕಲ್ಯಾಣಕ್ಕಾಗಿ ಭಾರತ ವಿಶ್ವ ಗುರು ಆಗಲಿ ಎಂದು ಅವರಿಬ್ಬರೂ ಕೂಡ ಪ್ರಾರ್ಥಿಸಲಿ ಇದರಲ್ಲಿ ವಯಕ್ತಿಕ ಹಿತಾಸಕ್ತಿ ಇಲ್ಲ ಎಂದು ಸಿ.ಟಿ ರವಿ ಹೇಳಿದ್ದಾರೆ.